BREAKING NEWS

ಸಮುದ್ರಯಾನಕ್ಕೆ ಮುಂದಾದ ಭಾರತ : ಮಾನವ ಸಹಿತ ಜಲಾಂತರ್ಗಾಮಿ ಮತ್ಸ್ಯ 6000 ಸಿದ್ಧ

ನವದೆಹಲಿ : ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ಸೂರ್ಯನ ಅನ್ವೇಷಣೆಗೆ ಆದಿತ್ಯ ಎಲ್‌-1 ನೌಕೆ ಕಳುಹಿಸಿರುವ ಭಾರತ ಇದೀಗ ಸಮುದ್ರಯಾನದತ್ತ ಮುಖ ಮಾಡಿದೆ.

ಭಾರತೀಯ ವಿಜ್ಞಾನಿಗಳ ಮಹತ್ವಾಕಾಂಕ್ಷೆಯ ಸಮುದ್ರಯಾನ ಯೋಜನೆ ಆರಂಭಕ್ಕೆ ಸಿದ್ಧತೆ ಶುರುವಾಗಿದೆ. ಬರೋಬ್ಬರಿ 6 ಸಾವಿರ ಮೀಟರ್ ಸಮುದ್ರದ ಆಳಕ್ಕೆ ಮೂವರು ಸಂಶೋಧಕರನ್ನು ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಇದಕ್ಕಾಗಿ ದೇಶೀಯ ನಿರ್ಮಿತ ಜಲಾಂತರ್ಗಾಮಿ ನೌಕೆ ಸಿದ್ಧವಾಗಿದೆ.

ಸಮುದ್ರದ ಆಳದಲ್ಲಿ ಇರಬಹುದಾದ ಬೆಲೆ ಬಾಳುವ ಲೋಹಗಳಾದ ನಿಕ್ಕಲ್, ಮ್ಯಾಂಗನೀಸ್, ಕೋಬಾಲ್ಟ್‌ ಲೋಹಗಳ ನಿಕ್ಷೇಪ ಪತ್ತೆ ಹಚ್ಚಲು ಈ ಯೋಜನೆ ಸಹಕಾರಿಯಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ತಜ್ಞರನ್ನು ಸಮುದ್ರದ ಆಳಕ್ಕೆ ಕರೆದೊಯ್ಯುವ ಜಲಾಂತರ್ಗಾಮಿ ನೌಕೆಗೆ ಮತ್ಸ್ಯ 6000 ಎಂದು ಹೆಸರಿಡಲಾಗಿದೆ. ಕಳೆದ ಎರಡು ವರ್ಷಗಳಿಂದ ಈ ನೌಕೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಚೆನ್ನೈ ಸಮೀಪದ ಸಾಗರ ತೀರದಲ್ಲಿ ಬಂಗಾಳ ಕೊಲ್ಲಿಯಲ್ಲಿ ಈ ಜಲಾಂತರ್ಗಾಮಿ ನೌಕೆಯ ಮೊದಲ ಸಮುದ್ರ ಪರೀಕ್ಷೆ ನಡೆಯಲಿದ್ದು, 2024ರ ಆರಂಭದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳುವ ನಿರೀಕ್ಷೆ ಇದೆ.

ಈ ಕುರಿತು ಮಾಹಿತಿ ನೀಡಿರುವ ಕೇಂದ್ರದ ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ. ರವಿಚಂದ್ರನ್, ಆಳ ಸಮುದ್ರ ಯೋಜನೆ ಅಡಿಯಲ್ಲಿ ಸಮುದ್ರಯಾನ ಕಾರ್ಯಕ್ರಮ ರೂಪಿಸಲಾಗಿದೆ. 2024ರ ಮೊದಲ ತ್ರೈಮಾಸಿಕದಲ್ಲಿ ಈ ನೌಕೆಯನ್ನು ಸಮುದ್ರದ 500 ಮೀಟರ್ ಆಳಕ್ಕೆ ಇಳಿಸಿ ಮೊದಲ ಪರೀಕ್ಷಾರ್ಥ ಪ್ರಯೋಗ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಈ ಯೋಜನೆ 2026ರ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಎನ್‌ಐಒಟಿ ನಿರ್ದೇಶಕ ಜಿ.ಎ ರಾಮದಾಸ್‌, 2.1 ಮೀಟರ್‌ ವ್ಯಾಸದ ಗೋಳಾಕಾರದಲ್ಲಿ ಈ ಜಲಾಂತರ್ಗಾಮಿಯನ್ನು ವಿನ್ಯಾಸಗೊಳಿಸಲಾಗಿದೆ. 6 ಸಾವಿರ ಮೀಟರ್‌ ಆಳಕ್ಕೆ ಕಳುಹಿಸಬೇಕಿರುವುದರಿಂದ 600 ಬಾರ್‌ ಒತ್ತಡ (ಸಮುದ್ರಮಟ್ಟದ ಒತ್ತಡಕ್ಕಿಂತ 600 ಪಟ್ಟು ಹೆಚ್ಚು) ತಡೆದುಕೊಳ್ಳುವ ಸಾಮರ್ಥ್ಯಕ್ಕೆ ತಕ್ಕಂತೆ ಜಲಾಂತರ್ಗಾಮಿಯನ್ನ ಸಿದ್ಧಪಡಿಸಲಾಗಿದೆ. 12 ರಿಂದ 16 ಗಂಟೆಗಳ ಕಾಲ ಕಾರ್ಯನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗಿದೆ. 96 ಗಂಟೆಗಳ ಕಾಲ ಆಕ್ಸಿಜನ್‌ ಇದರಲ್ಲಿ ಲಭ್ಯವಿರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈವರೆಗೆ ಅಮೆರಿಕ, ರಷ್ಯಾ, ಜಪಾನ್, ಫ್ರಾನ್ಸ್‌ ಹಾಗೂ ಚೀನಾ ದೇಶಗಳು ಮಾತ್ರ ಈ ಮಾದರಿಯ ಮಾನವ ಸಹಿತ ಜಲಾಂತರ್ಗಾಮಿ ನೌಕೆಗಳನ್ನು ಅಭಿವೃದ್ಧಿಪಡಿಸಿವೆ. ಈ ನೌಕೆ ಮೂಲಕ ಅಮೂಲ್ಯ ಲೋಹಗಳಾದ ನಿಕ್ಕಲ್, ಕೋಬಾಲ್ಟ್, ಮ್ಯಾಂಗನೀಸ್, ಹೈಡ್ರೋಥರ್ಮಲ್ ಸಲ್ಫೈಡ್ಸ್‌ ಹಾಗೂ ಗ್ಯಾಸ್ ಹೈಡ್ರೇಟ್ಸ್‌ಗಳನ್ನು ಪತ್ತೆ ಹಚ್ಚಲು ತೀರ್ಮಾನಿಸಲಾಗಿದೆ.

lokesh

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

11 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

18 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

23 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

23 hours ago