ನವದೆಹಲಿ : ಸಂಘರ್ಷ ಪೀಡಿತ ಹಾಗೂ ಇಸ್ರೇಲ್ನಿಂದ ದಿಗ್ಬಂಧನಕ್ಕೊಳಗಾಗಿರುವ ಗಾಝಾಗೆ ಭಾನುವಾರ ಭಾರತವು ವೈದ್ಯಕೀಯ ನೆರವು ಹಾಗೂ ಪರಿಹಾರ ಸಾಮಾಗ್ರಿಗಳನ್ನು ರವಾನಿಸಿತು ಎಂದು ndtv.com ವರದಿ ಮಾಡಿದೆ.
“ಈ ಪರಿಹಾರ ಸಾಮಾಗ್ರಿಗಳಲ್ಲಿ ಅತ್ಯಗತ್ಯ ಜೀವರಕ್ಷಕ ಔಷಧಗಳು, ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಟೆಂಟ್, ಟಾರ್ಪಾಲಿನ್ ಗಳು ಹಾಗೂ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ರವಾನಿಸಲಾಗಿದೆ” ಎಂದು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.
ಆಕ್ಟೋಬರ್ 7ರಂದು ಹಮಾಸ್ ಹೋರಾಟಗಾರರು ತನ್ನ ನೆಲದ ಮೇಲೆ ಹಠಾತ್ ದಾಳಿ ನಡೆಸಿದ ಬಳಿಕ ಗಾಝಾದ ಮೇಲೆ ಸಂಪೂರ್ಣ ದಿಗ್ಬಂಧನ ವಿಧಿಸಿರುವ ಇಸ್ರೇಲ್ ಅಲ್ಲಿಗೆ ನೀರು, ವಿದ್ಯುತ್, ಇಂಧನ ಹಾಗೂ ಆಹಾರ ಪೂರೈಕೆಯನ್ನು ಕಡಿತಗೊಳಿಸಿದೆ ಹಾಗೂ ಅವಶ್ಯಕ ವಸ್ತುಗಳ ತೀವ್ರ ಅಭಾವವನ್ನು ಸಷ್ಟಿಸಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…