BREAKING NEWS

IND vs AFG 3rd T20: ಸೂಪರ್ ಓವರ್‌ಗಳ ರೋಚಕ ಪಂದ್ಯದಲ್ಲಿ ಗೆದ್ದ ಭಾರತ

ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ( ಜನವರಿ 17 ) ನಡೆದ ರೋಚಕ ಮೂರನೇ ಟಿ 20 ಪಂದ್ಯ ಟೈ ಆದ ಕಾರಣ ಸೂಪರ್ ಓವರ್ ನಡೆದಿದ್ದು, ಅದೂ ಸಹ ಟೈ ಆಗಿ ಮತ್ತೊಂದು ಸೂಪರ್ ಓವರ್ ನಡೆದಿದೆ. ಎರಡನೇ ಸೂಪರ್ ಓವರ್‌ನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭಾರತ 10 ರನ್ ಗಳ ಗೆಲುವನ್ನು ದಾಖಲಿಸಿ 3 ಪಂದ್ಯಗಳ ಟಿ 20 ಸರಣಿಯಲ್ಲಿ ವೈಟ್ ವಾಷ್ ಸಾಧನೆ ಮಾಡಿದೆ‌. 

ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್ ಶರ್ಮಾ ಅಬ್ಬರದ ಶತಕ ಹಾಗೂ ರಿಂಕು ಸಿಂಗ್ ಆಕ್ರಮಣಕಾರಿ ಆಟದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿ ಎದುರಾಳಿ ಅಫ್ಘಾನಿಸ್ತಾನ ತಂಡಕ್ಕೆ ಗೆಲ್ಲಲು 213 ರನ್ ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಅಫ್ಘಾನಿಸ್ತಾನ ಅಂತಿಮ ಎಸೆತದವರೆಗೂ ದಿಟ್ಟ ಹೋರಾಟ ನಡೆಸಿತು.‌ ರಹ್ಮನ್ನುಲ್ಲಾ ಗುರ್ಬಜ್ ಹಾಗೂ ಇಬ್ರಾಹಿಂ ಜದ್ರನ್ ಉತ್ತಮ‌ ಆಟದಿಂದ ಒಳ್ಳೆಯ ಆರಂಭ ಪಡೆದುಕೊಂಡಿದ್ದ ತಂಡವನ್ನು ಮೊಹಮ್ಮದ್ ನಬಿ ಹಾಗೂ ಗುಲ್ಬದಿನ್ ನೈಬ್ ಗೆಲುವಿನ ಸನಿಹಕ್ಕೆ ತಂದಿತ್ತು‌. ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. ಈ ಮೂಲಕ ಪಂದ್ಯ ಟೈ ಆಗಿ ಸೂಪರ್ ಓವರ್ ನಡೆಯಿತು.

ಮೊದಲ ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 16 ರನ್ ಗಳಿಸಿ ಭಾರತಕ್ಕೆ 17 ರನ್ ಗುರಿ ನೀಡಿತು. ಗುರ್ಬಜ್ ಬೌಂಡರಿ ಹಾಗೂ ನಬಿ ಸಿಕ್ಸರ್ ಬಾರಿಸುವ ಮೂಲಕ ಸೂಪರ್ ಓವರ್‌ನಲ್ಲೂ ಅಬ್ಬರಿಸಿದರು. ಇತ್ತ ಭಾರತ ಸೂಪರ್ ಓವರ್‌ನಲ್ಲಿ 16 ಗಳಿಸಿದ್ದು, ಪಂದ್ಯ ಮತ್ತೆ ಡ್ರಾಗೊಂಡು ಮತ್ತೊಂದು ಸೂಪರ್ ಓವರ್ ನಡೆದಿದೆ.

ಭಾರತದ ಪರ ಸೂಪರ್ ಓವರ್‌ನಲ್ಲಿ ರೋಹಿತ್ ಹಾಗೂ ಜೈಸ್ವಾಲ್ ಕಣಕ್ಕಿಳಿದರು. ಮೊದಲ ಎಸೆತದಲ್ಲಿ ರೋಹಿತ್ 1, ಎರಡನೇ ಎಸೆತದಲ್ಲಿ ಜೈಸ್ವಾಲ್ 1 ರನ್ ಬಾರಿಸಿದರೆ, 3 ಹಾಗೂ 4ನೇ ಎಸೆತಗಳಲ್ಲಿ ರೋಹಿತ್ ಸಿಕ್ಸರ್ ಚಚ್ಚಿದರು ಹಾಗೂ 5 ನೇ ಎಸೆತದಲ್ಲಿ 1 ರನ್ ಕಲೆ ಹಾಕಿದರು.‌ ಅಂತಿಮವಾಗಿ 1 ಎಸೆತಕ್ಕೆ 2 ರನ್ ಬೇಕಿದ್ದಾಗ ಜೈಸ್ವಾಲ್ 1 ರನ್ ಗಳಿಸಿದರು.

ಹೀಗೆ ಮೊದಲ ಸೂಪರ್ ಓವರ್ ಟೈ ಆದ ಬಳಿಕ ಎರಡನೇ ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 5 ಎಸೆತಗಳಲ್ಲಿ 11 ರನ್ ಗಳಿಸಿ ಆಲ್ ಔಟ್ ಆಗಿ ಅಫ್ಘಾನಿಸ್ತಾನಕ್ಕೆ 12 ರನ್ ಗುರಿ ನೀಡಿತು. ತಂಡದ ಪರ ರೋಹಿತ್ 1 ಸಿಕ್ಸರ್, 1 ಬೌಂಡರಿ, 1 ರನ್ ಬಾರಿಸಿದರು‌. ಅತ್ತ ಅಫ್ಘಾನಿಸ್ತಾನ ಮೊದಲ ಎಸೆತದಲ್ಲಿ ನಬಿ ಹಾಗೂ ಮೂರನೇ ಎಸೆತದಲ್ಲಿ ಗುರ್ಬಜ್ ಕಳೆದುಕೊಂಡು ಕೇವಲ 1 ರನ್ ಗೆ ಆಲ್ ಔಟ್ ಆಯಿತು. ಈ ಮೂಲಕ ಭಾರತದ ಎರಡನೇ ಸೂಪರ್ ಓವರ್‌ನಲ್ಲಿ 10 ರನ್ ಗಳ ಗೆಲುವು ದಾಖಲಿಸಿತು.

andolana

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

32 mins ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

44 mins ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

2 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

2 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

3 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

3 hours ago