BREAKING NEWS

IND vs AFG 3rd T20: ಸೂಪರ್ ಓವರ್‌ಗಳ ರೋಚಕ ಪಂದ್ಯದಲ್ಲಿ ಗೆದ್ದ ಭಾರತ

ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ( ಜನವರಿ 17 ) ನಡೆದ ರೋಚಕ ಮೂರನೇ ಟಿ 20 ಪಂದ್ಯ ಟೈ ಆದ ಕಾರಣ ಸೂಪರ್ ಓವರ್ ನಡೆದಿದ್ದು, ಅದೂ ಸಹ ಟೈ ಆಗಿ ಮತ್ತೊಂದು ಸೂಪರ್ ಓವರ್ ನಡೆದಿದೆ. ಎರಡನೇ ಸೂಪರ್ ಓವರ್‌ನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭಾರತ 10 ರನ್ ಗಳ ಗೆಲುವನ್ನು ದಾಖಲಿಸಿ 3 ಪಂದ್ಯಗಳ ಟಿ 20 ಸರಣಿಯಲ್ಲಿ ವೈಟ್ ವಾಷ್ ಸಾಧನೆ ಮಾಡಿದೆ‌. 

ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್ ಶರ್ಮಾ ಅಬ್ಬರದ ಶತಕ ಹಾಗೂ ರಿಂಕು ಸಿಂಗ್ ಆಕ್ರಮಣಕಾರಿ ಆಟದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿ ಎದುರಾಳಿ ಅಫ್ಘಾನಿಸ್ತಾನ ತಂಡಕ್ಕೆ ಗೆಲ್ಲಲು 213 ರನ್ ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಅಫ್ಘಾನಿಸ್ತಾನ ಅಂತಿಮ ಎಸೆತದವರೆಗೂ ದಿಟ್ಟ ಹೋರಾಟ ನಡೆಸಿತು.‌ ರಹ್ಮನ್ನುಲ್ಲಾ ಗುರ್ಬಜ್ ಹಾಗೂ ಇಬ್ರಾಹಿಂ ಜದ್ರನ್ ಉತ್ತಮ‌ ಆಟದಿಂದ ಒಳ್ಳೆಯ ಆರಂಭ ಪಡೆದುಕೊಂಡಿದ್ದ ತಂಡವನ್ನು ಮೊಹಮ್ಮದ್ ನಬಿ ಹಾಗೂ ಗುಲ್ಬದಿನ್ ನೈಬ್ ಗೆಲುವಿನ ಸನಿಹಕ್ಕೆ ತಂದಿತ್ತು‌. ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. ಈ ಮೂಲಕ ಪಂದ್ಯ ಟೈ ಆಗಿ ಸೂಪರ್ ಓವರ್ ನಡೆಯಿತು.

ಮೊದಲ ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 16 ರನ್ ಗಳಿಸಿ ಭಾರತಕ್ಕೆ 17 ರನ್ ಗುರಿ ನೀಡಿತು. ಗುರ್ಬಜ್ ಬೌಂಡರಿ ಹಾಗೂ ನಬಿ ಸಿಕ್ಸರ್ ಬಾರಿಸುವ ಮೂಲಕ ಸೂಪರ್ ಓವರ್‌ನಲ್ಲೂ ಅಬ್ಬರಿಸಿದರು. ಇತ್ತ ಭಾರತ ಸೂಪರ್ ಓವರ್‌ನಲ್ಲಿ 16 ಗಳಿಸಿದ್ದು, ಪಂದ್ಯ ಮತ್ತೆ ಡ್ರಾಗೊಂಡು ಮತ್ತೊಂದು ಸೂಪರ್ ಓವರ್ ನಡೆದಿದೆ.

ಭಾರತದ ಪರ ಸೂಪರ್ ಓವರ್‌ನಲ್ಲಿ ರೋಹಿತ್ ಹಾಗೂ ಜೈಸ್ವಾಲ್ ಕಣಕ್ಕಿಳಿದರು. ಮೊದಲ ಎಸೆತದಲ್ಲಿ ರೋಹಿತ್ 1, ಎರಡನೇ ಎಸೆತದಲ್ಲಿ ಜೈಸ್ವಾಲ್ 1 ರನ್ ಬಾರಿಸಿದರೆ, 3 ಹಾಗೂ 4ನೇ ಎಸೆತಗಳಲ್ಲಿ ರೋಹಿತ್ ಸಿಕ್ಸರ್ ಚಚ್ಚಿದರು ಹಾಗೂ 5 ನೇ ಎಸೆತದಲ್ಲಿ 1 ರನ್ ಕಲೆ ಹಾಕಿದರು.‌ ಅಂತಿಮವಾಗಿ 1 ಎಸೆತಕ್ಕೆ 2 ರನ್ ಬೇಕಿದ್ದಾಗ ಜೈಸ್ವಾಲ್ 1 ರನ್ ಗಳಿಸಿದರು.

ಹೀಗೆ ಮೊದಲ ಸೂಪರ್ ಓವರ್ ಟೈ ಆದ ಬಳಿಕ ಎರಡನೇ ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 5 ಎಸೆತಗಳಲ್ಲಿ 11 ರನ್ ಗಳಿಸಿ ಆಲ್ ಔಟ್ ಆಗಿ ಅಫ್ಘಾನಿಸ್ತಾನಕ್ಕೆ 12 ರನ್ ಗುರಿ ನೀಡಿತು. ತಂಡದ ಪರ ರೋಹಿತ್ 1 ಸಿಕ್ಸರ್, 1 ಬೌಂಡರಿ, 1 ರನ್ ಬಾರಿಸಿದರು‌. ಅತ್ತ ಅಫ್ಘಾನಿಸ್ತಾನ ಮೊದಲ ಎಸೆತದಲ್ಲಿ ನಬಿ ಹಾಗೂ ಮೂರನೇ ಎಸೆತದಲ್ಲಿ ಗುರ್ಬಜ್ ಕಳೆದುಕೊಂಡು ಕೇವಲ 1 ರನ್ ಗೆ ಆಲ್ ಔಟ್ ಆಯಿತು. ಈ ಮೂಲಕ ಭಾರತದ ಎರಡನೇ ಸೂಪರ್ ಓವರ್‌ನಲ್ಲಿ 10 ರನ್ ಗಳ ಗೆಲುವು ದಾಖಲಿಸಿತು.

andolana

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

6 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

6 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

7 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

7 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

8 hours ago