BREAKING NEWS

IND vs AFG 3rd T20: ಸೂಪರ್ ಓವರ್‌ಗಳ ರೋಚಕ ಪಂದ್ಯದಲ್ಲಿ ಗೆದ್ದ ಭಾರತ

ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ( ಜನವರಿ 17 ) ನಡೆದ ರೋಚಕ ಮೂರನೇ ಟಿ 20 ಪಂದ್ಯ ಟೈ ಆದ ಕಾರಣ ಸೂಪರ್ ಓವರ್ ನಡೆದಿದ್ದು, ಅದೂ ಸಹ ಟೈ ಆಗಿ ಮತ್ತೊಂದು ಸೂಪರ್ ಓವರ್ ನಡೆದಿದೆ. ಎರಡನೇ ಸೂಪರ್ ಓವರ್‌ನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭಾರತ 10 ರನ್ ಗಳ ಗೆಲುವನ್ನು ದಾಖಲಿಸಿ 3 ಪಂದ್ಯಗಳ ಟಿ 20 ಸರಣಿಯಲ್ಲಿ ವೈಟ್ ವಾಷ್ ಸಾಧನೆ ಮಾಡಿದೆ‌. 

ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್ ಶರ್ಮಾ ಅಬ್ಬರದ ಶತಕ ಹಾಗೂ ರಿಂಕು ಸಿಂಗ್ ಆಕ್ರಮಣಕಾರಿ ಆಟದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿ ಎದುರಾಳಿ ಅಫ್ಘಾನಿಸ್ತಾನ ತಂಡಕ್ಕೆ ಗೆಲ್ಲಲು 213 ರನ್ ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಅಫ್ಘಾನಿಸ್ತಾನ ಅಂತಿಮ ಎಸೆತದವರೆಗೂ ದಿಟ್ಟ ಹೋರಾಟ ನಡೆಸಿತು.‌ ರಹ್ಮನ್ನುಲ್ಲಾ ಗುರ್ಬಜ್ ಹಾಗೂ ಇಬ್ರಾಹಿಂ ಜದ್ರನ್ ಉತ್ತಮ‌ ಆಟದಿಂದ ಒಳ್ಳೆಯ ಆರಂಭ ಪಡೆದುಕೊಂಡಿದ್ದ ತಂಡವನ್ನು ಮೊಹಮ್ಮದ್ ನಬಿ ಹಾಗೂ ಗುಲ್ಬದಿನ್ ನೈಬ್ ಗೆಲುವಿನ ಸನಿಹಕ್ಕೆ ತಂದಿತ್ತು‌. ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. ಈ ಮೂಲಕ ಪಂದ್ಯ ಟೈ ಆಗಿ ಸೂಪರ್ ಓವರ್ ನಡೆಯಿತು.

ಮೊದಲ ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 16 ರನ್ ಗಳಿಸಿ ಭಾರತಕ್ಕೆ 17 ರನ್ ಗುರಿ ನೀಡಿತು. ಗುರ್ಬಜ್ ಬೌಂಡರಿ ಹಾಗೂ ನಬಿ ಸಿಕ್ಸರ್ ಬಾರಿಸುವ ಮೂಲಕ ಸೂಪರ್ ಓವರ್‌ನಲ್ಲೂ ಅಬ್ಬರಿಸಿದರು. ಇತ್ತ ಭಾರತ ಸೂಪರ್ ಓವರ್‌ನಲ್ಲಿ 16 ಗಳಿಸಿದ್ದು, ಪಂದ್ಯ ಮತ್ತೆ ಡ್ರಾಗೊಂಡು ಮತ್ತೊಂದು ಸೂಪರ್ ಓವರ್ ನಡೆದಿದೆ.

ಭಾರತದ ಪರ ಸೂಪರ್ ಓವರ್‌ನಲ್ಲಿ ರೋಹಿತ್ ಹಾಗೂ ಜೈಸ್ವಾಲ್ ಕಣಕ್ಕಿಳಿದರು. ಮೊದಲ ಎಸೆತದಲ್ಲಿ ರೋಹಿತ್ 1, ಎರಡನೇ ಎಸೆತದಲ್ಲಿ ಜೈಸ್ವಾಲ್ 1 ರನ್ ಬಾರಿಸಿದರೆ, 3 ಹಾಗೂ 4ನೇ ಎಸೆತಗಳಲ್ಲಿ ರೋಹಿತ್ ಸಿಕ್ಸರ್ ಚಚ್ಚಿದರು ಹಾಗೂ 5 ನೇ ಎಸೆತದಲ್ಲಿ 1 ರನ್ ಕಲೆ ಹಾಕಿದರು.‌ ಅಂತಿಮವಾಗಿ 1 ಎಸೆತಕ್ಕೆ 2 ರನ್ ಬೇಕಿದ್ದಾಗ ಜೈಸ್ವಾಲ್ 1 ರನ್ ಗಳಿಸಿದರು.

ಹೀಗೆ ಮೊದಲ ಸೂಪರ್ ಓವರ್ ಟೈ ಆದ ಬಳಿಕ ಎರಡನೇ ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 5 ಎಸೆತಗಳಲ್ಲಿ 11 ರನ್ ಗಳಿಸಿ ಆಲ್ ಔಟ್ ಆಗಿ ಅಫ್ಘಾನಿಸ್ತಾನಕ್ಕೆ 12 ರನ್ ಗುರಿ ನೀಡಿತು. ತಂಡದ ಪರ ರೋಹಿತ್ 1 ಸಿಕ್ಸರ್, 1 ಬೌಂಡರಿ, 1 ರನ್ ಬಾರಿಸಿದರು‌. ಅತ್ತ ಅಫ್ಘಾನಿಸ್ತಾನ ಮೊದಲ ಎಸೆತದಲ್ಲಿ ನಬಿ ಹಾಗೂ ಮೂರನೇ ಎಸೆತದಲ್ಲಿ ಗುರ್ಬಜ್ ಕಳೆದುಕೊಂಡು ಕೇವಲ 1 ರನ್ ಗೆ ಆಲ್ ಔಟ್ ಆಯಿತು. ಈ ಮೂಲಕ ಭಾರತದ ಎರಡನೇ ಸೂಪರ್ ಓವರ್‌ನಲ್ಲಿ 10 ರನ್ ಗಳ ಗೆಲುವು ದಾಖಲಿಸಿತು.

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago