BREAKING NEWS

IND vs AFG 3rd T20: ಸೂಪರ್ ಓವರ್‌ನಲ್ಲೂ ಟೈ ಆದ ಪಂದ್ಯ, ಮತ್ತೊಂದು ಸೂಪರ್ ಓವರ್!

ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ( ಜನವರಿ 17 ) ನಡೆದ ರೋಚಕ ಮೂರನೇ ಟಿ 20 ಪಂದ್ಯ ಡ್ರಾ ಆದ ಕಾರಣ ಸೂಪರ್ ಓವರ್ ನಡೆದಿದ್ದು, ಅದೂ ಸಹ ಟೈ ಆಗಿ ಮತ್ತೊಂದು ಸೂಪರ್ ಓವರ್ ನಡೆದಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್ ಶರ್ಮಾ ಅಬ್ಬರದ ಶತಕ ಹಾಗೂ ರಿಂಕು ಸಿಂಗ್ ಆಕ್ರಮಣಕಾರಿ ಆಟದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿ ಎದುರಾಳಿ ಅಫ್ಘಾನಿಸ್ತಾನ ತಂಡಕ್ಕೆ ಗೆಲ್ಲಲು 213 ರನ್ ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಅಫ್ಘಾನಿಸ್ತಾನ ಅಂತಿಮ ಎಸೆತದವರೆಗೂ ದಿಟ್ಟ ಹೋರಾಟ ನಡೆಸಿತು.‌ ರಹ್ಮನ್ನುಲ್ಲಾ ಗುರ್ಬಜ್ ಹಾಗೂ ಇಬ್ರಾಹಿಂ ಜದ್ರನ್ ಉತ್ತಮ‌ ಆಟದಿಂದ ಒಳ್ಳೆಯ ಆರಂಭ ಪಡೆದುಕೊಂಡಿದ್ದ ತಂಡವನ್ನು ಮೊಹಮ್ಮದ್ ನಬಿ ಹಾಗೂ ಗುಲ್ಬದಿನ್ ನೈಬ್ ಗೆಲುವಿನ ಸನಿಹಕ್ಕೆ ತಂದಿತ್ತು‌. ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. ಈ ಮೂಲಕ ಪಂದ್ಯ ಡ್ರಾ ಆಗಿ ಸೂಪರ್ ಓವರ್ ನಡೆಯಿತು.

ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 16 ರನ್ ಗಳಿಸಿ ಭಾರತಕ್ಕೆ 17 ರನ್ ಗುರಿ ನೀಡಿತು. ಗುರ್ಬಜ್ ಬೌಂಡರಿ ಹಾಗೂ ನಬಿ ಸಿಕ್ಸರ್ ಬಾರಿಸುವ ಮೂಲಕ ಸೂಪರ್ ಓವರ್‌ನಲ್ಲೂ ಅಬ್ಬರಿಸಿದರು. ಇತ್ತ ಭಾರತ ಸಹ ಸೂಪರ್ ಓವರ್‌ನಲ್ಲಿ 16 ಗಳಿಸಿದ್ದು, ಪಂದ್ಯ ಮತ್ತೆ ಡ್ರಾಗೊಂಡು ಮತ್ತೊಂದು ಸೂಪರ್ ಓವರ್ ನಡೆದಿದೆ. 

ಭಾರತದ ಪರ ಸೂಪರ್ ಓವರ್‌ನಲ್ಲಿ ರೋಹಿತ್ ಹಾಗೂ ಜೈಸ್ವಾಲ್ ಕಣಕ್ಕಿಳಿದರು. ಮೊದಲ ಎಸೆತದಲ್ಲಿ ರೋಹಿತ್ 1, ಎರಡನೇ ಎಸೆತದಲ್ಲಿ ಜೈಸ್ವಾಲ್ 1 ರನ್ ಬಾರಿಸಿದರೆ, 3 ಹಾಗೂ 4ನೇ ಎಸೆತಗಳಲ್ಲಿ ರೋಹಿತ್ ಸಿಕ್ಸರ್ ಚಚ್ಚಿದರು ಹಾಗೂ 5 ನೇ ಎಸೆತದಲ್ಲಿ 1 ರನ್ ಕಲೆ ಹಾಕಿದರು.‌ ಅಂತಿಮವಾಗಿ 1 ಎಸೆತಕ್ಕೆ 2 ರನ್ ಬೇಕಿದ್ದಾಗ ಜೈಸ್ವಾಲ್ 1 ರನ್ ಗಳಿಸಿದರು.

andolana

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

9 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

10 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

12 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

13 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

16 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

16 hours ago