BREAKING NEWS

IND vs AFG 3rd T20: ಸೂಪರ್ ಓವರ್‌ನಲ್ಲೂ ಟೈ ಆದ ಪಂದ್ಯ, ಮತ್ತೊಂದು ಸೂಪರ್ ಓವರ್!

ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ( ಜನವರಿ 17 ) ನಡೆದ ರೋಚಕ ಮೂರನೇ ಟಿ 20 ಪಂದ್ಯ ಡ್ರಾ ಆದ ಕಾರಣ ಸೂಪರ್ ಓವರ್ ನಡೆದಿದ್ದು, ಅದೂ ಸಹ ಟೈ ಆಗಿ ಮತ್ತೊಂದು ಸೂಪರ್ ಓವರ್ ನಡೆದಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್ ಶರ್ಮಾ ಅಬ್ಬರದ ಶತಕ ಹಾಗೂ ರಿಂಕು ಸಿಂಗ್ ಆಕ್ರಮಣಕಾರಿ ಆಟದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿ ಎದುರಾಳಿ ಅಫ್ಘಾನಿಸ್ತಾನ ತಂಡಕ್ಕೆ ಗೆಲ್ಲಲು 213 ರನ್ ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಅಫ್ಘಾನಿಸ್ತಾನ ಅಂತಿಮ ಎಸೆತದವರೆಗೂ ದಿಟ್ಟ ಹೋರಾಟ ನಡೆಸಿತು.‌ ರಹ್ಮನ್ನುಲ್ಲಾ ಗುರ್ಬಜ್ ಹಾಗೂ ಇಬ್ರಾಹಿಂ ಜದ್ರನ್ ಉತ್ತಮ‌ ಆಟದಿಂದ ಒಳ್ಳೆಯ ಆರಂಭ ಪಡೆದುಕೊಂಡಿದ್ದ ತಂಡವನ್ನು ಮೊಹಮ್ಮದ್ ನಬಿ ಹಾಗೂ ಗುಲ್ಬದಿನ್ ನೈಬ್ ಗೆಲುವಿನ ಸನಿಹಕ್ಕೆ ತಂದಿತ್ತು‌. ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. ಈ ಮೂಲಕ ಪಂದ್ಯ ಡ್ರಾ ಆಗಿ ಸೂಪರ್ ಓವರ್ ನಡೆಯಿತು.

ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 16 ರನ್ ಗಳಿಸಿ ಭಾರತಕ್ಕೆ 17 ರನ್ ಗುರಿ ನೀಡಿತು. ಗುರ್ಬಜ್ ಬೌಂಡರಿ ಹಾಗೂ ನಬಿ ಸಿಕ್ಸರ್ ಬಾರಿಸುವ ಮೂಲಕ ಸೂಪರ್ ಓವರ್‌ನಲ್ಲೂ ಅಬ್ಬರಿಸಿದರು. ಇತ್ತ ಭಾರತ ಸಹ ಸೂಪರ್ ಓವರ್‌ನಲ್ಲಿ 16 ಗಳಿಸಿದ್ದು, ಪಂದ್ಯ ಮತ್ತೆ ಡ್ರಾಗೊಂಡು ಮತ್ತೊಂದು ಸೂಪರ್ ಓವರ್ ನಡೆದಿದೆ. 

ಭಾರತದ ಪರ ಸೂಪರ್ ಓವರ್‌ನಲ್ಲಿ ರೋಹಿತ್ ಹಾಗೂ ಜೈಸ್ವಾಲ್ ಕಣಕ್ಕಿಳಿದರು. ಮೊದಲ ಎಸೆತದಲ್ಲಿ ರೋಹಿತ್ 1, ಎರಡನೇ ಎಸೆತದಲ್ಲಿ ಜೈಸ್ವಾಲ್ 1 ರನ್ ಬಾರಿಸಿದರೆ, 3 ಹಾಗೂ 4ನೇ ಎಸೆತಗಳಲ್ಲಿ ರೋಹಿತ್ ಸಿಕ್ಸರ್ ಚಚ್ಚಿದರು ಹಾಗೂ 5 ನೇ ಎಸೆತದಲ್ಲಿ 1 ರನ್ ಕಲೆ ಹಾಕಿದರು.‌ ಅಂತಿಮವಾಗಿ 1 ಎಸೆತಕ್ಕೆ 2 ರನ್ ಬೇಕಿದ್ದಾಗ ಜೈಸ್ವಾಲ್ 1 ರನ್ ಗಳಿಸಿದರು.

andolana

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

4 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

5 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

6 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

6 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

6 hours ago