ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ( ಜನವರಿ 17 ) ನಡೆದ ರೋಚಕ ಮೂರನೇ ಟಿ 20 ಪಂದ್ಯ ಡ್ರಾ ಆದ ಕಾರಣ ಸೂಪರ್ ಓವರ್ ನಡೆದಿದ್ದು, ಅದೂ ಸಹ ಟೈ ಆಗಿ ಮತ್ತೊಂದು ಸೂಪರ್ ಓವರ್ ನಡೆದಿದೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್ ಶರ್ಮಾ ಅಬ್ಬರದ ಶತಕ ಹಾಗೂ ರಿಂಕು ಸಿಂಗ್ ಆಕ್ರಮಣಕಾರಿ ಆಟದ ನೆರವಿನಿಂದ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿ ಎದುರಾಳಿ ಅಫ್ಘಾನಿಸ್ತಾನ ತಂಡಕ್ಕೆ ಗೆಲ್ಲಲು 213 ರನ್ ಗಳ ಗುರಿ ನೀಡಿತ್ತು.
ಈ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಅಫ್ಘಾನಿಸ್ತಾನ ಅಂತಿಮ ಎಸೆತದವರೆಗೂ ದಿಟ್ಟ ಹೋರಾಟ ನಡೆಸಿತು. ರಹ್ಮನ್ನುಲ್ಲಾ ಗುರ್ಬಜ್ ಹಾಗೂ ಇಬ್ರಾಹಿಂ ಜದ್ರನ್ ಉತ್ತಮ ಆಟದಿಂದ ಒಳ್ಳೆಯ ಆರಂಭ ಪಡೆದುಕೊಂಡಿದ್ದ ತಂಡವನ್ನು ಮೊಹಮ್ಮದ್ ನಬಿ ಹಾಗೂ ಗುಲ್ಬದಿನ್ ನೈಬ್ ಗೆಲುವಿನ ಸನಿಹಕ್ಕೆ ತಂದಿತ್ತು. ಅಫ್ಘಾನಿಸ್ತಾನ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. ಈ ಮೂಲಕ ಪಂದ್ಯ ಡ್ರಾ ಆಗಿ ಸೂಪರ್ ಓವರ್ ನಡೆಯಿತು.
ಸೂಪರ್ ಓವರ್ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 16 ರನ್ ಗಳಿಸಿ ಭಾರತಕ್ಕೆ 17 ರನ್ ಗುರಿ ನೀಡಿತು. ಗುರ್ಬಜ್ ಬೌಂಡರಿ ಹಾಗೂ ನಬಿ ಸಿಕ್ಸರ್ ಬಾರಿಸುವ ಮೂಲಕ ಸೂಪರ್ ಓವರ್ನಲ್ಲೂ ಅಬ್ಬರಿಸಿದರು. ಇತ್ತ ಭಾರತ ಸಹ ಸೂಪರ್ ಓವರ್ನಲ್ಲಿ 16 ಗಳಿಸಿದ್ದು, ಪಂದ್ಯ ಮತ್ತೆ ಡ್ರಾಗೊಂಡು ಮತ್ತೊಂದು ಸೂಪರ್ ಓವರ್ ನಡೆದಿದೆ.
ಭಾರತದ ಪರ ಸೂಪರ್ ಓವರ್ನಲ್ಲಿ ರೋಹಿತ್ ಹಾಗೂ ಜೈಸ್ವಾಲ್ ಕಣಕ್ಕಿಳಿದರು. ಮೊದಲ ಎಸೆತದಲ್ಲಿ ರೋಹಿತ್ 1, ಎರಡನೇ ಎಸೆತದಲ್ಲಿ ಜೈಸ್ವಾಲ್ 1 ರನ್ ಬಾರಿಸಿದರೆ, 3 ಹಾಗೂ 4ನೇ ಎಸೆತಗಳಲ್ಲಿ ರೋಹಿತ್ ಸಿಕ್ಸರ್ ಚಚ್ಚಿದರು ಹಾಗೂ 5 ನೇ ಎಸೆತದಲ್ಲಿ 1 ರನ್ ಕಲೆ ಹಾಕಿದರು. ಅಂತಿಮವಾಗಿ 1 ಎಸೆತಕ್ಕೆ 2 ರನ್ ಬೇಕಿದ್ದಾಗ ಜೈಸ್ವಾಲ್ 1 ರನ್ ಗಳಿಸಿದರು.
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…
ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…