ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ( ಜನವರಿ 17 ) ನಡೆದ ರೋಚಕ ಮೂರನೇ ಟಿ 20 ಪಂದ್ಯ ಡ್ರಾ ಆದ ಕಾರಣ ಸೂಪರ್ ಓವರ್ ನಡೆದಿದ್ದು, ಅದೂ ಸಹ ಟೈ ಆಗಿ ಮತ್ತೊಂದು ಸೂಪರ್ ಓವರ್ ನಡೆದಿದೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್ ಶರ್ಮಾ ಅಬ್ಬರದ ಶತಕ ಹಾಗೂ ರಿಂಕು ಸಿಂಗ್ ಆಕ್ರಮಣಕಾರಿ ಆಟದ ನೆರವಿನಿಂದ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿ ಎದುರಾಳಿ ಅಫ್ಘಾನಿಸ್ತಾನ ತಂಡಕ್ಕೆ ಗೆಲ್ಲಲು 213 ರನ್ ಗಳ ಗುರಿ ನೀಡಿತ್ತು.
ಈ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಅಫ್ಘಾನಿಸ್ತಾನ ಅಂತಿಮ ಎಸೆತದವರೆಗೂ ದಿಟ್ಟ ಹೋರಾಟ ನಡೆಸಿತು. ರಹ್ಮನ್ನುಲ್ಲಾ ಗುರ್ಬಜ್ ಹಾಗೂ ಇಬ್ರಾಹಿಂ ಜದ್ರನ್ ಉತ್ತಮ ಆಟದಿಂದ ಒಳ್ಳೆಯ ಆರಂಭ ಪಡೆದುಕೊಂಡಿದ್ದ ತಂಡವನ್ನು ಮೊಹಮ್ಮದ್ ನಬಿ ಹಾಗೂ ಗುಲ್ಬದಿನ್ ನೈಬ್ ಗೆಲುವಿನ ಸನಿಹಕ್ಕೆ ತಂದಿತ್ತು. ಅಫ್ಘಾನಿಸ್ತಾನ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. ಈ ಮೂಲಕ ಪಂದ್ಯ ಡ್ರಾ ಆಗಿ ಸೂಪರ್ ಓವರ್ ನಡೆಯಿತು.
ಸೂಪರ್ ಓವರ್ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 16 ರನ್ ಗಳಿಸಿ ಭಾರತಕ್ಕೆ 17 ರನ್ ಗುರಿ ನೀಡಿತು. ಗುರ್ಬಜ್ ಬೌಂಡರಿ ಹಾಗೂ ನಬಿ ಸಿಕ್ಸರ್ ಬಾರಿಸುವ ಮೂಲಕ ಸೂಪರ್ ಓವರ್ನಲ್ಲೂ ಅಬ್ಬರಿಸಿದರು. ಇತ್ತ ಭಾರತ ಸಹ ಸೂಪರ್ ಓವರ್ನಲ್ಲಿ 16 ಗಳಿಸಿದ್ದು, ಪಂದ್ಯ ಮತ್ತೆ ಡ್ರಾಗೊಂಡು ಮತ್ತೊಂದು ಸೂಪರ್ ಓವರ್ ನಡೆದಿದೆ.
ಭಾರತದ ಪರ ಸೂಪರ್ ಓವರ್ನಲ್ಲಿ ರೋಹಿತ್ ಹಾಗೂ ಜೈಸ್ವಾಲ್ ಕಣಕ್ಕಿಳಿದರು. ಮೊದಲ ಎಸೆತದಲ್ಲಿ ರೋಹಿತ್ 1, ಎರಡನೇ ಎಸೆತದಲ್ಲಿ ಜೈಸ್ವಾಲ್ 1 ರನ್ ಬಾರಿಸಿದರೆ, 3 ಹಾಗೂ 4ನೇ ಎಸೆತಗಳಲ್ಲಿ ರೋಹಿತ್ ಸಿಕ್ಸರ್ ಚಚ್ಚಿದರು ಹಾಗೂ 5 ನೇ ಎಸೆತದಲ್ಲಿ 1 ರನ್ ಕಲೆ ಹಾಕಿದರು. ಅಂತಿಮವಾಗಿ 1 ಎಸೆತಕ್ಕೆ 2 ರನ್ ಬೇಕಿದ್ದಾಗ ಜೈಸ್ವಾಲ್ 1 ರನ್ ಗಳಿಸಿದರು.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…