BREAKING NEWS

IND vs SA 2nd ODI: ಸುಲಭ ಜಯ ಕಂಡು ಸರಣಿಯಲ್ಲಿ ಸಮಬಲ ಸಾಧಿಸಿದ ಹರಿಣಗಳು

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಸಮಬಲ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿದ್ದ ಭಾರತ ಇಂದು ( ಡಿಸೆಂಬರ್‌ 19 ) ಜಿಕೆಬರ್ಹಾದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಸೋಲನ್ನು ಕಂಡಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಬ್ಯಾಟಿಂಗ್‌ ಮಾಡಿದ ಭಾರತ 46.2 ಓವರ್‌ಗಳಲ್ಲಿ 211 ರನ್‌ ಕಲೆಹಾಕಿ ಆಲ್‌ಔಟ್‌ ಆಗಿ ಎದುರಾಳಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 212 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ದಕ್ಷಿಣ ಆಫ್ರಿಕಾ 42.3 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಹರಿಣಗಳು 3 ಪಂದ್ಯಗಳ ಏಕದಿನ  ಸರಣಿಯಲ್ಲಿ 1 – 1 ಅಂತರದಿಂದ ಸಮಬಲ‌ ಸಾಧಿಸಿದೆ.

 

ಭಾರತದ ಇನ್ನಿಂಗ್ಸ್: ಟೀಮ್‌ ಇಂಡಿಯಾ ಪರ ನಾಯಕ ಕೆಎಲ್‌ ರಾಹುಲ್‌ ಹಾಗೂ ಸಾಯಿ ಸುದರ್ಶನ್‌ ಅರ್ಧಶತಕ ಬಾರಿಸುವ ಮೂಲಕ ಜವಾಬ್ದಾರಿಯುತ ಆಟವನ್ನಾಡಿದ್ದಾರೆ. ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್‌ 62 ರನ್‌ ಗಳಿಸಿದರೆ, ನಾಯಕ ರಾಹುಲ್‌ 56 ರನ್‌ ಬಾರಿಸಿದರು.

ಇನ್ನುಳಿದಂತೆ ಭಾರತದ ಯಾವ ಆಟಗಾರನೂ ಸಹ ಗಮನ ಸೆಳೆಯುವ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲಿಲ್ಲ. ರುತುರಾಜ್‌ ಗಾಯಕ್ವಾಡ್‌ 4 ರನ್‌, ತಿಲಕ್‌ ವರ್ಮಾ 10, ಸಂಜು ಸ್ಯಾಮ್ಸನ್‌ 12, ರಿಂಕು ಸಿಂಗ್‌ 17, ಅಕ್ಷರ್‌ ಪಟೇಲ್‌ 7, ಕುಲ್‌ದೀಪ್‌ ಯಾದವ್‌ 1, ಅರ್ಷ್‌ದೀಪ್‌ ಸಿಂಗ್‌ 18, ಅವೇಶ್‌ ಖಾನ್‌ 9 ಹಾಗೂ ಮುಖೇಶ್‌ ಕುಮಾರ್‌ ಅಜೇಯ 4 ರನ್‌ ಕಲೆಹಾಕಿದರು.

ದಕ್ಷಿಣ ಆಫ್ರಿಕಾ ಪರ ನಂಡ್ರೆ ಬರ್ಗರ್‌ 3 ವಿಕೆಟ್‌, ಬ್ಯೂರನ್‌ ಹೆಂಡ್ರಿಕ್ಸ್‌ ಹಾಗೂ ಕೇಶವ್‌ ಮಹಾರಾಜ್‌ ತಲಾ 2 ವಿಕೆಟ್‌ ಮತ್ತು ಲಿಜಾರ್ಡ್‌ ವಿಲಿಯಮ್ಸ್‌ ಹಾಗೂ ಏಡನ್‌ ಮಾರ್ಕ್ರಮ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್: ಭಾರತ ನೀಡಿದ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಪರ ಆರಂಭಿಕರಾಗಿ ಕಣಕ್ಕಿಳಿದ ರೀಜಾ ಹೆಡ್ರಿಕ್ಸ್ ಹಾಗೂ ಟೋನಿ ಡಿ ಝೋರ್ಝಿ 130 ರನ್ ಜತೆಯಾಟ ಆಡುವುದರ ಮೂಲಕ ಒಳ್ಳೆಯ ಆರಂಭ ಕಟ್ಟಿಕೊಟ್ಟರು. ರೀಜಾ ಹೆಂಡ್ರಿಕ್ಸ್ 52 ರನ್ ಗಳಿಸಿ ಔಟ್ ಆದರೆ ಟೋನಿ ಡಿ ಝೋರ್ಝಿ 119 ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನುಳಿದಂತೆ ರಸ್ಸಿ ವಾಂಡರ್ ಡಸನ್ 36 ರನ್ ಹಾಗೂ ನಾಯಕ ಮಾರ್ಕ್ರಮ್ ಅಜೇಯ 2 ರನ್ ಗಳಿಸಿದರು.

ಭಾರತದ ಪರ ರಿಂಕು ಸಿಂಗ್, ಸಾಯಿ ಸುದರ್ಶನ್ ಸೇರಿದಂತೆ ಒಟ್ಟು ಎಂಟು ಆಟಗಾರರು ಬೌಲಿಂಗ್ ಮಾಡಿದ್ದು, ಈ ಪೈಕಿ ರಿಂಕು ಸಿಂಗ್ ಹಾಗೂ ಅರ್ಷದೀಪ್ ಸಿಂಗ್ ಮಾತ್ರ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ‌.

andolana

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

3 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

3 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

3 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

12 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

12 hours ago