ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಸಮಬಲ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿದ್ದ ಭಾರತ ಇಂದು ( ಡಿಸೆಂಬರ್ 19 ) ಜಿಕೆಬರ್ಹಾದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಸೋಲನ್ನು ಕಂಡಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡಿದ ಭಾರತ 46.2 ಓವರ್ಗಳಲ್ಲಿ 211 ರನ್ ಕಲೆಹಾಕಿ ಆಲ್ಔಟ್ ಆಗಿ ಎದುರಾಳಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 212 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ದಕ್ಷಿಣ ಆಫ್ರಿಕಾ 42.3 ಓವರ್ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಹರಿಣಗಳು 3 ಪಂದ್ಯಗಳ ಏಕದಿನ ಸರಣಿಯಲ್ಲಿ 1 – 1 ಅಂತರದಿಂದ ಸಮಬಲ ಸಾಧಿಸಿದೆ.
ಭಾರತದ ಇನ್ನಿಂಗ್ಸ್: ಟೀಮ್ ಇಂಡಿಯಾ ಪರ ನಾಯಕ ಕೆಎಲ್ ರಾಹುಲ್ ಹಾಗೂ ಸಾಯಿ ಸುದರ್ಶನ್ ಅರ್ಧಶತಕ ಬಾರಿಸುವ ಮೂಲಕ ಜವಾಬ್ದಾರಿಯುತ ಆಟವನ್ನಾಡಿದ್ದಾರೆ. ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ 62 ರನ್ ಗಳಿಸಿದರೆ, ನಾಯಕ ರಾಹುಲ್ 56 ರನ್ ಬಾರಿಸಿದರು.
ಇನ್ನುಳಿದಂತೆ ಭಾರತದ ಯಾವ ಆಟಗಾರನೂ ಸಹ ಗಮನ ಸೆಳೆಯುವ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲಿಲ್ಲ. ರುತುರಾಜ್ ಗಾಯಕ್ವಾಡ್ 4 ರನ್, ತಿಲಕ್ ವರ್ಮಾ 10, ಸಂಜು ಸ್ಯಾಮ್ಸನ್ 12, ರಿಂಕು ಸಿಂಗ್ 17, ಅಕ್ಷರ್ ಪಟೇಲ್ 7, ಕುಲ್ದೀಪ್ ಯಾದವ್ 1, ಅರ್ಷ್ದೀಪ್ ಸಿಂಗ್ 18, ಅವೇಶ್ ಖಾನ್ 9 ಹಾಗೂ ಮುಖೇಶ್ ಕುಮಾರ್ ಅಜೇಯ 4 ರನ್ ಕಲೆಹಾಕಿದರು.
ದಕ್ಷಿಣ ಆಫ್ರಿಕಾ ಪರ ನಂಡ್ರೆ ಬರ್ಗರ್ 3 ವಿಕೆಟ್, ಬ್ಯೂರನ್ ಹೆಂಡ್ರಿಕ್ಸ್ ಹಾಗೂ ಕೇಶವ್ ಮಹಾರಾಜ್ ತಲಾ 2 ವಿಕೆಟ್ ಮತ್ತು ಲಿಜಾರ್ಡ್ ವಿಲಿಯಮ್ಸ್ ಹಾಗೂ ಏಡನ್ ಮಾರ್ಕ್ರಮ್ ತಲಾ ಒಂದೊಂದು ವಿಕೆಟ್ ಪಡೆದರು.
ದಕ್ಷಿಣ ಆಫ್ರಿಕಾ ಇನ್ನಿಂಗ್ಸ್: ಭಾರತ ನೀಡಿದ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಪರ ಆರಂಭಿಕರಾಗಿ ಕಣಕ್ಕಿಳಿದ ರೀಜಾ ಹೆಡ್ರಿಕ್ಸ್ ಹಾಗೂ ಟೋನಿ ಡಿ ಝೋರ್ಝಿ 130 ರನ್ ಜತೆಯಾಟ ಆಡುವುದರ ಮೂಲಕ ಒಳ್ಳೆಯ ಆರಂಭ ಕಟ್ಟಿಕೊಟ್ಟರು. ರೀಜಾ ಹೆಂಡ್ರಿಕ್ಸ್ 52 ರನ್ ಗಳಿಸಿ ಔಟ್ ಆದರೆ ಟೋನಿ ಡಿ ಝೋರ್ಝಿ 119 ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನುಳಿದಂತೆ ರಸ್ಸಿ ವಾಂಡರ್ ಡಸನ್ 36 ರನ್ ಹಾಗೂ ನಾಯಕ ಮಾರ್ಕ್ರಮ್ ಅಜೇಯ 2 ರನ್ ಗಳಿಸಿದರು.
ಭಾರತದ ಪರ ರಿಂಕು ಸಿಂಗ್, ಸಾಯಿ ಸುದರ್ಶನ್ ಸೇರಿದಂತೆ ಒಟ್ಟು ಎಂಟು ಆಟಗಾರರು ಬೌಲಿಂಗ್ ಮಾಡಿದ್ದು, ಈ ಪೈಕಿ ರಿಂಕು ಸಿಂಗ್ ಹಾಗೂ ಅರ್ಷದೀಪ್ ಸಿಂಗ್ ಮಾತ್ರ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ಗೆ ಸಿಎಂ…
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…