BREAKING NEWS

IND vs SA 2nd ODI: ಸುಲಭ ಜಯ ಕಂಡು ಸರಣಿಯಲ್ಲಿ ಸಮಬಲ ಸಾಧಿಸಿದ ಹರಿಣಗಳು

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಸಮಬಲ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿದ್ದ ಭಾರತ ಇಂದು ( ಡಿಸೆಂಬರ್‌ 19 ) ಜಿಕೆಬರ್ಹಾದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಸೋಲನ್ನು ಕಂಡಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಬ್ಯಾಟಿಂಗ್‌ ಮಾಡಿದ ಭಾರತ 46.2 ಓವರ್‌ಗಳಲ್ಲಿ 211 ರನ್‌ ಕಲೆಹಾಕಿ ಆಲ್‌ಔಟ್‌ ಆಗಿ ಎದುರಾಳಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 212 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ದಕ್ಷಿಣ ಆಫ್ರಿಕಾ 42.3 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಹರಿಣಗಳು 3 ಪಂದ್ಯಗಳ ಏಕದಿನ  ಸರಣಿಯಲ್ಲಿ 1 – 1 ಅಂತರದಿಂದ ಸಮಬಲ‌ ಸಾಧಿಸಿದೆ.

 

ಭಾರತದ ಇನ್ನಿಂಗ್ಸ್: ಟೀಮ್‌ ಇಂಡಿಯಾ ಪರ ನಾಯಕ ಕೆಎಲ್‌ ರಾಹುಲ್‌ ಹಾಗೂ ಸಾಯಿ ಸುದರ್ಶನ್‌ ಅರ್ಧಶತಕ ಬಾರಿಸುವ ಮೂಲಕ ಜವಾಬ್ದಾರಿಯುತ ಆಟವನ್ನಾಡಿದ್ದಾರೆ. ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್‌ 62 ರನ್‌ ಗಳಿಸಿದರೆ, ನಾಯಕ ರಾಹುಲ್‌ 56 ರನ್‌ ಬಾರಿಸಿದರು.

ಇನ್ನುಳಿದಂತೆ ಭಾರತದ ಯಾವ ಆಟಗಾರನೂ ಸಹ ಗಮನ ಸೆಳೆಯುವ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲಿಲ್ಲ. ರುತುರಾಜ್‌ ಗಾಯಕ್ವಾಡ್‌ 4 ರನ್‌, ತಿಲಕ್‌ ವರ್ಮಾ 10, ಸಂಜು ಸ್ಯಾಮ್ಸನ್‌ 12, ರಿಂಕು ಸಿಂಗ್‌ 17, ಅಕ್ಷರ್‌ ಪಟೇಲ್‌ 7, ಕುಲ್‌ದೀಪ್‌ ಯಾದವ್‌ 1, ಅರ್ಷ್‌ದೀಪ್‌ ಸಿಂಗ್‌ 18, ಅವೇಶ್‌ ಖಾನ್‌ 9 ಹಾಗೂ ಮುಖೇಶ್‌ ಕುಮಾರ್‌ ಅಜೇಯ 4 ರನ್‌ ಕಲೆಹಾಕಿದರು.

ದಕ್ಷಿಣ ಆಫ್ರಿಕಾ ಪರ ನಂಡ್ರೆ ಬರ್ಗರ್‌ 3 ವಿಕೆಟ್‌, ಬ್ಯೂರನ್‌ ಹೆಂಡ್ರಿಕ್ಸ್‌ ಹಾಗೂ ಕೇಶವ್‌ ಮಹಾರಾಜ್‌ ತಲಾ 2 ವಿಕೆಟ್‌ ಮತ್ತು ಲಿಜಾರ್ಡ್‌ ವಿಲಿಯಮ್ಸ್‌ ಹಾಗೂ ಏಡನ್‌ ಮಾರ್ಕ್ರಮ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್: ಭಾರತ ನೀಡಿದ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಪರ ಆರಂಭಿಕರಾಗಿ ಕಣಕ್ಕಿಳಿದ ರೀಜಾ ಹೆಡ್ರಿಕ್ಸ್ ಹಾಗೂ ಟೋನಿ ಡಿ ಝೋರ್ಝಿ 130 ರನ್ ಜತೆಯಾಟ ಆಡುವುದರ ಮೂಲಕ ಒಳ್ಳೆಯ ಆರಂಭ ಕಟ್ಟಿಕೊಟ್ಟರು. ರೀಜಾ ಹೆಂಡ್ರಿಕ್ಸ್ 52 ರನ್ ಗಳಿಸಿ ಔಟ್ ಆದರೆ ಟೋನಿ ಡಿ ಝೋರ್ಝಿ 119 ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನುಳಿದಂತೆ ರಸ್ಸಿ ವಾಂಡರ್ ಡಸನ್ 36 ರನ್ ಹಾಗೂ ನಾಯಕ ಮಾರ್ಕ್ರಮ್ ಅಜೇಯ 2 ರನ್ ಗಳಿಸಿದರು.

ಭಾರತದ ಪರ ರಿಂಕು ಸಿಂಗ್, ಸಾಯಿ ಸುದರ್ಶನ್ ಸೇರಿದಂತೆ ಒಟ್ಟು ಎಂಟು ಆಟಗಾರರು ಬೌಲಿಂಗ್ ಮಾಡಿದ್ದು, ಈ ಪೈಕಿ ರಿಂಕು ಸಿಂಗ್ ಹಾಗೂ ಅರ್ಷದೀಪ್ ಸಿಂಗ್ ಮಾತ್ರ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ‌.

andolana

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

15 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

18 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

21 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 days ago