ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಸಮಬಲ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿರುವ ಭಾರತ ಇಂದು ( ಡಿಸೆಂಬರ್ 19 ) ಜಿಕೆಬರ್ಹಾದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಹರಿಣಗಳಿಗೆ ಗೆಲ್ಲಲು 212 ರನ್ಗಳ ಗುರಿಯನ್ನು ನೀಡಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 46.2 ಓವರ್ಗಳಲ್ಲಿ 211 ರನ್ ಕಲೆಹಾಕಿ ಆಲ್ಔಟ್ ಆಗಿದೆ. ಟೀಮ್ ಇಂಡಿಯಾ ಪರ ನಾಯಕ ಕೆಎಲ್ ರಾಹುಲ್ ಹಾಗೂ ಸಾಯಿ ಸುದರ್ಶನ್ ಅರ್ಧಶತಕ ಬಾರಿಸುವ ಮೂಲಕ ಜವಾಬ್ದಾರಿಯುತ ಆಟವನ್ನಾಡಿದ್ದಾರೆ. ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ 62 ರನ್ ಗಳಿಸಿದರೆ, ನಾಯಕ ರಾಹುಲ್ 56 ರನ್ ಬಾರಿಸಿದರು.
ಇನ್ನುಳಿದಂತೆ ಭಾರತದ ಯಾವ ಆಟಗಾರನೂ ಸಹ ಗಮನ ಸೆಳೆಯುವ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲಿಲ್ಲ. ರುತುರಾಜ್ ಗಾಯಕ್ವಾಡ್ 4 ರನ್, ತಿಲಕ್ ವರ್ಮಾ 10, ಸಂಜು ಸ್ಯಾಮ್ಸನ್ 12, ರಿಂಕು ಸಿಂಗ್ 17, ಅಕ್ಷರ್ ಪಟೇಲ್ 7, ಕುಲ್ದೀಪ್ ಯಾದವ್ 1, ಅರ್ಷ್ದೀಪ್ ಸಿಂಗ್ 18, ಅವೇಶ್ ಖಾನ್ 9 ಹಾಗೂ ಮುಖೇಶ್ ಕುಮಾರ್ ಅಜೇಯ 4 ರನ್ ಕಲೆಹಾಕಿದರು.
ದಕ್ಷಿಣ ಆಫ್ರಿಕಾ ಪರ ನಂಡ್ರೆ ಬರ್ಗರ್ 3 ವಿಕೆಟ್, ಬ್ಯೂರನ್ ಹೆಂಡ್ರಿಕ್ಸ್ ಹಾಗೂ ಕೇಶವ್ ಮಹಾರಾಜ್ ತಲಾ 2 ವಿಕೆಟ್ ಮತ್ತು ಲಿಜಾರ್ಡ್ ವಿಲಿಯಮ್ಸ್ ಹಾಗೂ ಏಡನ್ ಮಾರ್ಕ್ರಮ್ ತಲಾ ಒಂದೊಂದು ವಿಕೆಟ್ ಪಡೆದರು.
ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…