BREAKING NEWS

IND vs SA 2nd ODI: ದಕ್ಷಿಣ ಆಫ್ರಿಕಾಗೆ 212 ರನ್‌ಗಳ ಗುರಿ ನೀಡಿದ ಭಾರತ

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಸಮಬಲ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿರುವ ಭಾರತ ಇಂದು ( ಡಿಸೆಂಬರ್‌ 19 ) ಜಿಕೆಬರ್ಹಾದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿ ಹರಿಣಗಳಿಗೆ ಗೆಲ್ಲಲು 212 ರನ್‌ಗಳ ಗುರಿಯನ್ನು ನೀಡಿದೆ.

ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 46.2 ಓವರ್‌ಗಳಲ್ಲಿ 211 ರನ್‌ ಕಲೆಹಾಕಿ ಆಲ್‌ಔಟ್‌ ಆಗಿದೆ. ಟೀಮ್‌ ಇಂಡಿಯಾ ಪರ ನಾಯಕ ಕೆಎಲ್‌ ರಾಹುಲ್‌ ಹಾಗೂ ಸಾಯಿ ಸುದರ್ಶನ್‌ ಅರ್ಧಶತಕ ಬಾರಿಸುವ ಮೂಲಕ ಜವಾಬ್ದಾರಿಯುತ ಆಟವನ್ನಾಡಿದ್ದಾರೆ. ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್‌ 62 ರನ್‌ ಗಳಿಸಿದರೆ, ನಾಯಕ ರಾಹುಲ್‌ 56 ರನ್‌ ಬಾರಿಸಿದರು.

ಇನ್ನುಳಿದಂತೆ ಭಾರತದ ಯಾವ ಆಟಗಾರನೂ ಸಹ ಗಮನ ಸೆಳೆಯುವ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲಿಲ್ಲ. ರುತುರಾಜ್‌ ಗಾಯಕ್ವಾಡ್‌ 4 ರನ್‌, ತಿಲಕ್‌ ವರ್ಮಾ 10, ಸಂಜು ಸ್ಯಾಮ್ಸನ್‌ 12, ರಿಂಕು ಸಿಂಗ್‌ 17, ಅಕ್ಷರ್‌ ಪಟೇಲ್‌ 7, ಕುಲ್‌ದೀಪ್‌ ಯಾದವ್‌ 1, ಅರ್ಷ್‌ದೀಪ್‌ ಸಿಂಗ್‌ 18, ಅವೇಶ್‌ ಖಾನ್‌ 9 ಹಾಗೂ ಮುಖೇಶ್‌ ಕುಮಾರ್‌ ಅಜೇಯ 4 ರನ್‌ ಕಲೆಹಾಕಿದರು.

ದಕ್ಷಿಣ ಆಫ್ರಿಕಾ ಪರ ನಂಡ್ರೆ ಬರ್ಗರ್‌ 3 ವಿಕೆಟ್‌, ಬ್ಯೂರನ್‌ ಹೆಂಡ್ರಿಕ್ಸ್‌ ಹಾಗೂ ಕೇಶವ್‌ ಮಹಾರಾಜ್‌ ತಲಾ 2 ವಿಕೆಟ್‌ ಮತ್ತು ಲಿಜಾರ್ಡ್‌ ವಿಲಿಯಮ್ಸ್‌ ಹಾಗೂ ಏಡನ್‌ ಮಾರ್ಕ್ರಮ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

8 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

9 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

9 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

10 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

13 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

14 hours ago