BREAKING NEWS

IND vs SA 2nd ODI: ದಕ್ಷಿಣ ಆಫ್ರಿಕಾಗೆ 212 ರನ್‌ಗಳ ಗುರಿ ನೀಡಿದ ಭಾರತ

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಸಮಬಲ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿರುವ ಭಾರತ ಇಂದು ( ಡಿಸೆಂಬರ್‌ 19 ) ಜಿಕೆಬರ್ಹಾದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿ ಹರಿಣಗಳಿಗೆ ಗೆಲ್ಲಲು 212 ರನ್‌ಗಳ ಗುರಿಯನ್ನು ನೀಡಿದೆ.

ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 46.2 ಓವರ್‌ಗಳಲ್ಲಿ 211 ರನ್‌ ಕಲೆಹಾಕಿ ಆಲ್‌ಔಟ್‌ ಆಗಿದೆ. ಟೀಮ್‌ ಇಂಡಿಯಾ ಪರ ನಾಯಕ ಕೆಎಲ್‌ ರಾಹುಲ್‌ ಹಾಗೂ ಸಾಯಿ ಸುದರ್ಶನ್‌ ಅರ್ಧಶತಕ ಬಾರಿಸುವ ಮೂಲಕ ಜವಾಬ್ದಾರಿಯುತ ಆಟವನ್ನಾಡಿದ್ದಾರೆ. ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್‌ 62 ರನ್‌ ಗಳಿಸಿದರೆ, ನಾಯಕ ರಾಹುಲ್‌ 56 ರನ್‌ ಬಾರಿಸಿದರು.

ಇನ್ನುಳಿದಂತೆ ಭಾರತದ ಯಾವ ಆಟಗಾರನೂ ಸಹ ಗಮನ ಸೆಳೆಯುವ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲಿಲ್ಲ. ರುತುರಾಜ್‌ ಗಾಯಕ್ವಾಡ್‌ 4 ರನ್‌, ತಿಲಕ್‌ ವರ್ಮಾ 10, ಸಂಜು ಸ್ಯಾಮ್ಸನ್‌ 12, ರಿಂಕು ಸಿಂಗ್‌ 17, ಅಕ್ಷರ್‌ ಪಟೇಲ್‌ 7, ಕುಲ್‌ದೀಪ್‌ ಯಾದವ್‌ 1, ಅರ್ಷ್‌ದೀಪ್‌ ಸಿಂಗ್‌ 18, ಅವೇಶ್‌ ಖಾನ್‌ 9 ಹಾಗೂ ಮುಖೇಶ್‌ ಕುಮಾರ್‌ ಅಜೇಯ 4 ರನ್‌ ಕಲೆಹಾಕಿದರು.

ದಕ್ಷಿಣ ಆಫ್ರಿಕಾ ಪರ ನಂಡ್ರೆ ಬರ್ಗರ್‌ 3 ವಿಕೆಟ್‌, ಬ್ಯೂರನ್‌ ಹೆಂಡ್ರಿಕ್ಸ್‌ ಹಾಗೂ ಕೇಶವ್‌ ಮಹಾರಾಜ್‌ ತಲಾ 2 ವಿಕೆಟ್‌ ಮತ್ತು ಲಿಜಾರ್ಡ್‌ ವಿಲಿಯಮ್ಸ್‌ ಹಾಗೂ ಏಡನ್‌ ಮಾರ್ಕ್ರಮ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

3 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

4 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

5 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

6 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

7 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

8 hours ago