BREAKING NEWS

IND vs SA 2nd T20: ಭಾರತದ ವಿರುದ್ಧ ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡ ಹರಿಣಗಳು

ಟೀಮ್‌ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು ಮೊದಲಿಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಿದೆ. ಡಿಸೆಂಬರ್‌ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್‌ ಕೂಡ ಆಗದೇ ರದ್ದಾಗಿತ್ತು. ಇಂದು ( ಡಿಸೆಂಬರ್‌ 12 ) ಎರಡನೇ ಟಿ ಟ್ವೆಂಟಿ ಪಂದ್ಯ ಜಿಕೆಬರ್ಹಾದ ಸೇಂಟ್‌ ಜಾರ್ಜ್‌ ಪಾರ್ಕ್‌ನಲ್ಲಿ ನಡೆದಿದ್ದು, ಈ ಪಂದ್ಯಕ್ಕೂ ಸಹ ಮಳೆ ಅಡ್ಡಿ ಉಂಟುಮಾಡಿದ ಕಾರಣ ಪಂದ್ಯದ ಎರಡನೇ ಇನ್ನಿಂಗ್ಸ್‌ ಅನ್ನು 15 ಓವರ್‌ಗಳಿಗೆ ಮೊಟಕುಗೊಳಿಸಲಾಗಿತ್ತು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 19.3 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 180 ರನ್‌ ಕಲೆಹಾಕಿತ್ತು. 19.3 ಓವರ್‌ ಬಳಿಕ ಮಳೆ ಬಂದ ಕಾರಣ ಇನ್ನಿಂಗ್ಸ್‌ ಅನ್ನು ಮೊಟಕುಗೊಳಿಸಲಾಯಿತು. ಡೆಕ್‌ವರ್ತ್‌ ಲೂಯಿಸ್‌ ನಿಯಮದ ಪ್ರಕಾರ ದಕ್ಷಿಣ ಆಫ್ರಿಕಾ ಗೆಲ್ಲಲು 15 ಓವರ್‌ಗಳಲ್ಲಿ 152 ರನ್‌ಗಳನ್ನು ಬಾರಿಸಬೇಕಾಯಿತು.

ಈ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ 13.5 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 154 ರನ್‌ ಕಲೆಹಾಕಿ 5 ವಿಕೆಟ್‌ಗಳ ಗೆಲುವು ಸಾಧಿಸುವುದರ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರ ಮುನ್ನಡೆ ಕಾಯ್ದುಕೊಂಡಿದೆ.

ಟೀಮ್‌ ಇಂಡಿಯಾ ಇನ್ನಿಂಗ್ಸ್: ಭಾರತದ ಪರ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್‌ ಹಾಗೂ ಶುಭ್‌ಮನ್‌ ಗಿಲ್‌ ಡಕ್‌ಔಟ್‌ ಆದ ಕಾರಣ ತಂಡ 2 ಓವರ್‌ಗಳಲ್ಲಿ ಕೇವಲ 6 ರನ್‌ಗೆ 2 ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ತಿಲಕ್‌ ವರ್ಮಾ ಹಾಗೂ ನಾಯಕ ಸೂರ್ಯಕುಮಾರ್‌ ಯಾದವ್‌ ಜತೆಗೂಡಿ ತಂಡದ ಮೊತ್ತ ಸುಧಾರಿಸುವ ಹಾಗೆ ಮಾಡಿದರು. ತಿಲಕ್‌ ವರ್ಮಾ 29 ರನ್‌ ಬಾರಿಸಿದರೆ, ಸೂರ್ಯಕುಮಾರ್‌ ಯಾದವ್‌ 36 ಎಸೆತಗಳಲ್ಲಿ 3 ಸಿಕ್ಸರ್‌ ಹಾಗೂ 5 ಬೌಂಡರಿ ಸಹಿತ 56 ರನ್‌ ಬಾರಿಸಿದರು. ಈ ಪಂದ್ಯದಲ್ಲಿಯೂ ಅಬ್ಬರಿಸಿದ ರಿಂಕು ಸಿಂಗ್‌ 39 ಎಸೆತಗಳಲ್ಲಿ 2 ಸಿಕ್ಸರ್‌ ಹಾಗೂ 9 ಬೌಂಡರಿ ಸಹಿತ 68 ರನ್‌ ಬಾರಿಸಿದರು. ಇನ್ನುಳಿದಂತೆ ರವೀಂದ್ರ ಜಡೇಜಾ 19 ರನ್‌, ಜಿತೇಶ್‌ ಶರ್ಮಾ 1 ರನ್‌, ಅರ್ಷ್‌ದೀಪ್‌ ಸಿಂಗ್ ಡಕ್‌ಔಟ್‌, ಮೊಹಮ್ಮದ್‌ ಸಿರಾಜ್‌ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್:‌ ದಕ್ಷಿಣ ಆಫ್ರಿಕಾದ ಪರ ಆರಂಭದಲ್ಲಿ ಅಬ್ಬರಿಸಿದ ರೀಜಾ ಹೆಂಡ್ರಿಕ್ಸ್‌ 49, ಮ್ಯಾಥ್ಯೂ ಬ್ರೀಟ್ಜ್ಕಿ 16, ಏಡನ್‌ ಮಾರ್ಕ್ರಮ್‌ 30, ಹೆನ್‌ರಿಚ್‌ ಕ್ಲಾಸೀನ್‌ 7, ಡೇವಿಡ್‌ ಮಿಲ್ಲರ್‌ 17, ಟ್ರಿಸ್ಟನ್‌ ಸ್ಟಬ್ಸ್‌ ಅಜೇಯ 14 ಹಾಗೂ ಆಂಡಿಲ್‌ ಫೆಹ್ಲುಕ್ವಾಯೊ ಅಜೇಯ 10 ರನ್‌ ಗಳಿಸಿದರು.

ಭಾರತದ ಪರ ಮುಖೇಶ್‌ ಕುಮಾರ್‌ 2 ವಿಕೆಟ್‌ ಹಾಗೂ ಕುಲ್‌ದೀಪ್‌ ಯಾದವ್‌ ಮತ್ತು ಮೊಹಮ್ಮದ್‌ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

2 mins ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

4 mins ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

6 mins ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

9 mins ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

13 mins ago