BREAKING NEWS

IND vs SA 2nd T20: ಭಾರತದ ವಿರುದ್ಧ ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡ ಹರಿಣಗಳು

ಟೀಮ್‌ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು ಮೊದಲಿಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಿದೆ. ಡಿಸೆಂಬರ್‌ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್‌ ಕೂಡ ಆಗದೇ ರದ್ದಾಗಿತ್ತು. ಇಂದು ( ಡಿಸೆಂಬರ್‌ 12 ) ಎರಡನೇ ಟಿ ಟ್ವೆಂಟಿ ಪಂದ್ಯ ಜಿಕೆಬರ್ಹಾದ ಸೇಂಟ್‌ ಜಾರ್ಜ್‌ ಪಾರ್ಕ್‌ನಲ್ಲಿ ನಡೆದಿದ್ದು, ಈ ಪಂದ್ಯಕ್ಕೂ ಸಹ ಮಳೆ ಅಡ್ಡಿ ಉಂಟುಮಾಡಿದ ಕಾರಣ ಪಂದ್ಯದ ಎರಡನೇ ಇನ್ನಿಂಗ್ಸ್‌ ಅನ್ನು 15 ಓವರ್‌ಗಳಿಗೆ ಮೊಟಕುಗೊಳಿಸಲಾಗಿತ್ತು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 19.3 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 180 ರನ್‌ ಕಲೆಹಾಕಿತ್ತು. 19.3 ಓವರ್‌ ಬಳಿಕ ಮಳೆ ಬಂದ ಕಾರಣ ಇನ್ನಿಂಗ್ಸ್‌ ಅನ್ನು ಮೊಟಕುಗೊಳಿಸಲಾಯಿತು. ಡೆಕ್‌ವರ್ತ್‌ ಲೂಯಿಸ್‌ ನಿಯಮದ ಪ್ರಕಾರ ದಕ್ಷಿಣ ಆಫ್ರಿಕಾ ಗೆಲ್ಲಲು 15 ಓವರ್‌ಗಳಲ್ಲಿ 152 ರನ್‌ಗಳನ್ನು ಬಾರಿಸಬೇಕಾಯಿತು.

ಈ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ 13.5 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 154 ರನ್‌ ಕಲೆಹಾಕಿ 5 ವಿಕೆಟ್‌ಗಳ ಗೆಲುವು ಸಾಧಿಸುವುದರ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರ ಮುನ್ನಡೆ ಕಾಯ್ದುಕೊಂಡಿದೆ.

ಟೀಮ್‌ ಇಂಡಿಯಾ ಇನ್ನಿಂಗ್ಸ್: ಭಾರತದ ಪರ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್‌ ಹಾಗೂ ಶುಭ್‌ಮನ್‌ ಗಿಲ್‌ ಡಕ್‌ಔಟ್‌ ಆದ ಕಾರಣ ತಂಡ 2 ಓವರ್‌ಗಳಲ್ಲಿ ಕೇವಲ 6 ರನ್‌ಗೆ 2 ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ತಿಲಕ್‌ ವರ್ಮಾ ಹಾಗೂ ನಾಯಕ ಸೂರ್ಯಕುಮಾರ್‌ ಯಾದವ್‌ ಜತೆಗೂಡಿ ತಂಡದ ಮೊತ್ತ ಸುಧಾರಿಸುವ ಹಾಗೆ ಮಾಡಿದರು. ತಿಲಕ್‌ ವರ್ಮಾ 29 ರನ್‌ ಬಾರಿಸಿದರೆ, ಸೂರ್ಯಕುಮಾರ್‌ ಯಾದವ್‌ 36 ಎಸೆತಗಳಲ್ಲಿ 3 ಸಿಕ್ಸರ್‌ ಹಾಗೂ 5 ಬೌಂಡರಿ ಸಹಿತ 56 ರನ್‌ ಬಾರಿಸಿದರು. ಈ ಪಂದ್ಯದಲ್ಲಿಯೂ ಅಬ್ಬರಿಸಿದ ರಿಂಕು ಸಿಂಗ್‌ 39 ಎಸೆತಗಳಲ್ಲಿ 2 ಸಿಕ್ಸರ್‌ ಹಾಗೂ 9 ಬೌಂಡರಿ ಸಹಿತ 68 ರನ್‌ ಬಾರಿಸಿದರು. ಇನ್ನುಳಿದಂತೆ ರವೀಂದ್ರ ಜಡೇಜಾ 19 ರನ್‌, ಜಿತೇಶ್‌ ಶರ್ಮಾ 1 ರನ್‌, ಅರ್ಷ್‌ದೀಪ್‌ ಸಿಂಗ್ ಡಕ್‌ಔಟ್‌, ಮೊಹಮ್ಮದ್‌ ಸಿರಾಜ್‌ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್:‌ ದಕ್ಷಿಣ ಆಫ್ರಿಕಾದ ಪರ ಆರಂಭದಲ್ಲಿ ಅಬ್ಬರಿಸಿದ ರೀಜಾ ಹೆಂಡ್ರಿಕ್ಸ್‌ 49, ಮ್ಯಾಥ್ಯೂ ಬ್ರೀಟ್ಜ್ಕಿ 16, ಏಡನ್‌ ಮಾರ್ಕ್ರಮ್‌ 30, ಹೆನ್‌ರಿಚ್‌ ಕ್ಲಾಸೀನ್‌ 7, ಡೇವಿಡ್‌ ಮಿಲ್ಲರ್‌ 17, ಟ್ರಿಸ್ಟನ್‌ ಸ್ಟಬ್ಸ್‌ ಅಜೇಯ 14 ಹಾಗೂ ಆಂಡಿಲ್‌ ಫೆಹ್ಲುಕ್ವಾಯೊ ಅಜೇಯ 10 ರನ್‌ ಗಳಿಸಿದರು.

ಭಾರತದ ಪರ ಮುಖೇಶ್‌ ಕುಮಾರ್‌ 2 ವಿಕೆಟ್‌ ಹಾಗೂ ಕುಲ್‌ದೀಪ್‌ ಯಾದವ್‌ ಮತ್ತು ಮೊಹಮ್ಮದ್‌ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago