ಟೀಮ್ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು ಮೊದಲಿಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಿದೆ. ಡಿಸೆಂಬರ್ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್ ಕೂಡ ಆಗದೇ ರದ್ದಾಗಿತ್ತು. ಇಂದು ( ಡಿಸೆಂಬರ್ 12 ) ಎರಡನೇ ಟಿ ಟ್ವೆಂಟಿ ಪಂದ್ಯ ಜಿಕೆಬರ್ಹಾದ ಸೇಂಟ್ ಜಾರ್ಜ್ ಪಾರ್ಕ್ನಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಭಾರತ ತಂಡ 19.3 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 180 ರನ್ ಕಲೆಹಾಕಿದೆ. 19.3 ಓವರ್ ಬಳಿಕ ಮಳೆ ಬಂದ ಕಾರಣ ಇನ್ನಿಂಗ್ಸ್ ಅನ್ನು ಮೊಟಕುಗೊಳಿಸಿದ್ದು ಡೆಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಪಂದ್ಯ 15 ಓವರ್ಗೆ ನಡೆಯಲಿದೆ. ಡೆಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ದಕ್ಷಿಣ ಆಫ್ರಿಕಾ 15 ಓವರ್ಗಳಲ್ಲಿ ಗೆಲ್ಲಲು 152 ರನ್ಗಳನ್ನು ಬಾರಿಸಬೇಕಿದೆ.
ಭಾರತದ ಪರ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ ಹಾಗೂ ಶುಭ್ಮನ್ ಗಿಲ್ ಡಕ್ಔಟ್ ಆದ ಕಾರಣ ತಂಡ 2 ಓವರ್ಗಳಲ್ಲಿ ಕೇವಲ 6 ರನ್ಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ತಿಲಕ್ ವರ್ಮಾ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಜತೆಗೂಡಿ ತಂಡದ ಮೊತ್ತ ಸುಧಾರಿಸುವ ಹಾಗೆ ಮಾಡಿದರು.
ತಿಲಕ್ ವರ್ಮಾ 29 ರನ್ ಬಾರಿಸಿದರೆ, ಸೂರ್ಯಕುಮಾರ್ ಯಾದವ್ 36 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 5 ಬೌಂಡರಿ ಸಹಿತ 56 ರನ್ ಬಾರಿಸಿದರು. ಈ ಪಂದ್ಯದಲ್ಲಿಯೂ ಅಬ್ಬರಿಸಿದ ರಿಂಕು ಸಿಂಗ್ 39 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 9 ಬೌಂಡರಿ ಸಹಿತ 68 ರನ್ ಬಾರಿಸಿದರು. ಇನ್ನುಳಿದಂತೆ ರವೀಂದ್ರ ಜಡೇಜಾ 19 ರನ್, ಜಿತೇಶ್ ಶರ್ಮಾ 1 ರನ್, ಅರ್ಷ್ದೀಪ್ ಸಿಂಗ್ ಡಕ್ಔಟ್, ಮೊಹಮ್ಮದ್ ಸಿರಾಜ್ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…