BREAKING NEWS

IND vs SA 2nd Test: ಮೊಹಮ್ಮದ್‌ ಸಿರಾಜ್‌ ಮ್ಯಾಜಿಕ್;‌ ಕೇವಲ 55 ರನ್‌ಗೆ ದ.ಆಫ್ರಿಕಾ ಆಲ್‌ಔಟ್‌

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಮ್‌ ಇಂಡಿಯಾ ಸದ್ಯ ಟೆಸ್ಟ್‌ ಸರಣಿಯಲ್ಲಿ ನಿರತವಾಗಿದ್ದು, ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಬಳಿಕ ಇದೀಗ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಪುಟಿದೆದ್ದಿದೆ. ಇಂದಿನಿಂದ ( ಜನವರಿ 3 ) ಎರಡನೇ ಟೆಸ್ಟ್‌ ಪಂದ್ಯ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿ ಮೊದಲ ಇನ್ನಿಂಗ್ಸ್‌ನಲ್ಲಿ 23.2 ಓವರ್‌ಗೆ ಕೇವಲ 55 ರನ್‌ಗಳಿಗೆ ಆಲ್ ಔಟ್‌ ಆಗಿದೆ.

ಭಾರತದ ಪರ ಮೊಹಮ್ಮದ್‌ ಸಿರಾಜ್‌ 6 ವಿಕೆಟ್‌ಗಳನ್ನು ಕಬಳಿಸಿ ಭರ್ಜರಿ ಪ್ರದರ್ಶನ ನೀಡಿದರೆ, ಜಸ್‌ಪ್ರೀತ್‌ ಬುಮ್ರಾ ಹಾಗೂ ಮುಖೇಶ್‌ ಕುಮಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು. ದಕ್ಷಿಣ ಆಫ್ರಿಕಾ ಪರ ಏಡನ್‌ ಮಾರ್ಕ್ರಮ್‌ 2, ಡೀನ್‌ ಎಲ್ಗರ್‌ 4, ಟೋನಿ ಡಿ ಝೋರ್ಝಿ 2, ಟ್ರಿಸ್ಟನ್‌ ಸ್ಟಬ್ಸ್‌ 3, ಡೇವಿಡ್‌ ಬೆಡಿಂಗ್‌ಹ್ಯಾಮ್‌ 12, ಕೈಲ್‌ ವೆರೆಯ್ನ್‌ 15, ಮಾರ್ಕೊ ಯಾನ್‌ಸೆನ್‌ 0, ಕೇಶವ್‌ ಮಹಾರಾಜ್‌ 3, ಕಗಿಸೋ ರಬಾಡಾ 5, ನಾಂದ್ರೆ ಬರ್ಗರ್‌ 4 ಹಾಗೂ ಲುಂಗಿ ಎನ್‌ಗಿಡಿ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

andolana

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

6 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

6 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

6 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

6 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

7 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

7 hours ago