BREAKING NEWS

IND vs SA 2nd Test: ಮೊಹಮ್ಮದ್‌ ಸಿರಾಜ್‌ ಮ್ಯಾಜಿಕ್;‌ ಕೇವಲ 55 ರನ್‌ಗೆ ದ.ಆಫ್ರಿಕಾ ಆಲ್‌ಔಟ್‌

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಮ್‌ ಇಂಡಿಯಾ ಸದ್ಯ ಟೆಸ್ಟ್‌ ಸರಣಿಯಲ್ಲಿ ನಿರತವಾಗಿದ್ದು, ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಬಳಿಕ ಇದೀಗ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಪುಟಿದೆದ್ದಿದೆ. ಇಂದಿನಿಂದ ( ಜನವರಿ 3 ) ಎರಡನೇ ಟೆಸ್ಟ್‌ ಪಂದ್ಯ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿ ಮೊದಲ ಇನ್ನಿಂಗ್ಸ್‌ನಲ್ಲಿ 23.2 ಓವರ್‌ಗೆ ಕೇವಲ 55 ರನ್‌ಗಳಿಗೆ ಆಲ್ ಔಟ್‌ ಆಗಿದೆ.

ಭಾರತದ ಪರ ಮೊಹಮ್ಮದ್‌ ಸಿರಾಜ್‌ 6 ವಿಕೆಟ್‌ಗಳನ್ನು ಕಬಳಿಸಿ ಭರ್ಜರಿ ಪ್ರದರ್ಶನ ನೀಡಿದರೆ, ಜಸ್‌ಪ್ರೀತ್‌ ಬುಮ್ರಾ ಹಾಗೂ ಮುಖೇಶ್‌ ಕುಮಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು. ದಕ್ಷಿಣ ಆಫ್ರಿಕಾ ಪರ ಏಡನ್‌ ಮಾರ್ಕ್ರಮ್‌ 2, ಡೀನ್‌ ಎಲ್ಗರ್‌ 4, ಟೋನಿ ಡಿ ಝೋರ್ಝಿ 2, ಟ್ರಿಸ್ಟನ್‌ ಸ್ಟಬ್ಸ್‌ 3, ಡೇವಿಡ್‌ ಬೆಡಿಂಗ್‌ಹ್ಯಾಮ್‌ 12, ಕೈಲ್‌ ವೆರೆಯ್ನ್‌ 15, ಮಾರ್ಕೊ ಯಾನ್‌ಸೆನ್‌ 0, ಕೇಶವ್‌ ಮಹಾರಾಜ್‌ 3, ಕಗಿಸೋ ರಬಾಡಾ 5, ನಾಂದ್ರೆ ಬರ್ಗರ್‌ 4 ಹಾಗೂ ಲುಂಗಿ ಎನ್‌ಗಿಡಿ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

andolana

Recent Posts

ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…

43 mins ago

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್‌…

1 hour ago

ಮೈಸೂರಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ: ದೇಗುಲಗಳಲ್ಲಿ ಭಕ್ತಸಾಗರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…

2 hours ago

ಹೊಸ ವರ್ಷಾಚರಣೆ: ರಾಜ್ಯದೆಲ್ಲೆಡೆ ತುರ್ತು ಚಿಕಿತ್ಸಾ ಸೇವೆಗೆ ಸಿದ್ಧತೆ

ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…

2 hours ago

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಯತ್ನ: ವಿಜಯೇಂದ್ರ ವಾಗ್ದಾಳಿ

ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು…

2 hours ago

ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಕಡಿವಾಣ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…

3 hours ago