BREAKING NEWS

IND vs SA 2nd Test: ಮೊಹಮ್ಮದ್‌ ಸಿರಾಜ್‌ ಮ್ಯಾಜಿಕ್;‌ ಕೇವಲ 55 ರನ್‌ಗೆ ದ.ಆಫ್ರಿಕಾ ಆಲ್‌ಔಟ್‌

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಮ್‌ ಇಂಡಿಯಾ ಸದ್ಯ ಟೆಸ್ಟ್‌ ಸರಣಿಯಲ್ಲಿ ನಿರತವಾಗಿದ್ದು, ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಬಳಿಕ ಇದೀಗ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಪುಟಿದೆದ್ದಿದೆ. ಇಂದಿನಿಂದ ( ಜನವರಿ 3 ) ಎರಡನೇ ಟೆಸ್ಟ್‌ ಪಂದ್ಯ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿ ಮೊದಲ ಇನ್ನಿಂಗ್ಸ್‌ನಲ್ಲಿ 23.2 ಓವರ್‌ಗೆ ಕೇವಲ 55 ರನ್‌ಗಳಿಗೆ ಆಲ್ ಔಟ್‌ ಆಗಿದೆ.

ಭಾರತದ ಪರ ಮೊಹಮ್ಮದ್‌ ಸಿರಾಜ್‌ 6 ವಿಕೆಟ್‌ಗಳನ್ನು ಕಬಳಿಸಿ ಭರ್ಜರಿ ಪ್ರದರ್ಶನ ನೀಡಿದರೆ, ಜಸ್‌ಪ್ರೀತ್‌ ಬುಮ್ರಾ ಹಾಗೂ ಮುಖೇಶ್‌ ಕುಮಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು. ದಕ್ಷಿಣ ಆಫ್ರಿಕಾ ಪರ ಏಡನ್‌ ಮಾರ್ಕ್ರಮ್‌ 2, ಡೀನ್‌ ಎಲ್ಗರ್‌ 4, ಟೋನಿ ಡಿ ಝೋರ್ಝಿ 2, ಟ್ರಿಸ್ಟನ್‌ ಸ್ಟಬ್ಸ್‌ 3, ಡೇವಿಡ್‌ ಬೆಡಿಂಗ್‌ಹ್ಯಾಮ್‌ 12, ಕೈಲ್‌ ವೆರೆಯ್ನ್‌ 15, ಮಾರ್ಕೊ ಯಾನ್‌ಸೆನ್‌ 0, ಕೇಶವ್‌ ಮಹಾರಾಜ್‌ 3, ಕಗಿಸೋ ರಬಾಡಾ 5, ನಾಂದ್ರೆ ಬರ್ಗರ್‌ 4 ಹಾಗೂ ಲುಂಗಿ ಎನ್‌ಗಿಡಿ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

andolana

Recent Posts

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

26 mins ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

1 hour ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

3 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

4 hours ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

7 hours ago