BREAKING NEWS

IND vs SA 2nd Test: ಮೊಹಮ್ಮದ್‌ ಸಿರಾಜ್‌ ಮ್ಯಾಜಿಕ್;‌ ಕೇವಲ 55 ರನ್‌ಗೆ ದ.ಆಫ್ರಿಕಾ ಆಲ್‌ಔಟ್‌

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಮ್‌ ಇಂಡಿಯಾ ಸದ್ಯ ಟೆಸ್ಟ್‌ ಸರಣಿಯಲ್ಲಿ ನಿರತವಾಗಿದ್ದು, ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಬಳಿಕ ಇದೀಗ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಪುಟಿದೆದ್ದಿದೆ. ಇಂದಿನಿಂದ ( ಜನವರಿ 3 ) ಎರಡನೇ ಟೆಸ್ಟ್‌ ಪಂದ್ಯ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿ ಮೊದಲ ಇನ್ನಿಂಗ್ಸ್‌ನಲ್ಲಿ 23.2 ಓವರ್‌ಗೆ ಕೇವಲ 55 ರನ್‌ಗಳಿಗೆ ಆಲ್ ಔಟ್‌ ಆಗಿದೆ.

ಭಾರತದ ಪರ ಮೊಹಮ್ಮದ್‌ ಸಿರಾಜ್‌ 6 ವಿಕೆಟ್‌ಗಳನ್ನು ಕಬಳಿಸಿ ಭರ್ಜರಿ ಪ್ರದರ್ಶನ ನೀಡಿದರೆ, ಜಸ್‌ಪ್ರೀತ್‌ ಬುಮ್ರಾ ಹಾಗೂ ಮುಖೇಶ್‌ ಕುಮಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು. ದಕ್ಷಿಣ ಆಫ್ರಿಕಾ ಪರ ಏಡನ್‌ ಮಾರ್ಕ್ರಮ್‌ 2, ಡೀನ್‌ ಎಲ್ಗರ್‌ 4, ಟೋನಿ ಡಿ ಝೋರ್ಝಿ 2, ಟ್ರಿಸ್ಟನ್‌ ಸ್ಟಬ್ಸ್‌ 3, ಡೇವಿಡ್‌ ಬೆಡಿಂಗ್‌ಹ್ಯಾಮ್‌ 12, ಕೈಲ್‌ ವೆರೆಯ್ನ್‌ 15, ಮಾರ್ಕೊ ಯಾನ್‌ಸೆನ್‌ 0, ಕೇಶವ್‌ ಮಹಾರಾಜ್‌ 3, ಕಗಿಸೋ ರಬಾಡಾ 5, ನಾಂದ್ರೆ ಬರ್ಗರ್‌ 4 ಹಾಗೂ ಲುಂಗಿ ಎನ್‌ಗಿಡಿ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

andolana

Recent Posts

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

59 mins ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

1 hour ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

1 hour ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

2 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

3 hours ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

4 hours ago