ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಎರಡೇ ದಿನಕ್ಕೆ ಮುಕ್ತಾಯಗೊಳ್ಳುವ ಹಂತಕ್ಕೆ ಬಂದು ತಲುಪಿದೆ. ಮೊದಲ ಇನ್ನಿಂಗ್ಸ್ನಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಕೇವಲ 55 ರನ್ಗೆ ಆಲ್ಔಟ್ ಆಗಿದ್ದ ದಕ್ಷಿಣ ಆಫ್ರಿಕಾ ಬಳಿಕ ಭಾರತ ತಂಡವನ್ನು 153 ರನ್ಗಳಿಗೆ ಆಲ್ ಔಟ್ ಮಾಡಿತ್ತು.
ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್ ಮುಕ್ತಾಯಕ್ಕೆ 98 ರನ್ಗಳ ಮುನ್ನಡೆಯನ್ನು ಸಾಧಿಸಿತ್ತು. ಸದ್ಯ ತನ್ನ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಅನ್ನು ಮುಗಿಸಿರುವ ಹರಿಣಗಳು 36.5 ಓವರ್ಗಳಲ್ಲಿ 176 ರನ್ಗೆ ಆಲ್ಔಟ್ ಆಗಿದ್ದು, 78 ರನ್ಗಳ ಮುನ್ನಡೆಯನ್ನು ಕಾಯ್ದುಕೊಂಡು ಭಾರತಕ್ಕೆ ಗೆಲ್ಲಲು 79 ರನ್ಗಳ ಗುರಿಯನ್ನು ನೀಡಿದೆ. ಮೊದಲ ಇನ್ನಿಂಗ್ಸ್ ರೀತಿ ಎರಡನೇ ಇನ್ನಿಂಗ್ಸ್ನಲ್ಲಿಯೂ ಸಹ ದಕ್ಷಿಣ ಆಫ್ರಿಕಾ ತೀರ ಅಲ್ಪಮೊತ್ತಕ್ಕೆ ಆಲ್ಔಟ್ ಆಗುವುದನ್ನು ಏಡನ್ ಮಾರ್ಕ್ರಮ್ ತಮ್ಮ ಅಮೋಘ ಶತಕದ ಆಟದಿಂದ ತಪ್ಪಿಸಿದರು. ಮಾರ್ಕ್ರಮ್ 103 ಎಸೆತಗಳಲ್ಲಿ 106 ರನ್ ಗಳಿಸಿದರು.
ಮೊದಲ ಇನ್ನಿಂಗ್ಸ್ನಲ್ಲಿ ಮೊಹಮ್ಮದ್ ಸಿರಾಜ್ 6 ವಿಕೆಟ್ ಪಡೆದು ಉತ್ತಮ ಪ್ರದರ್ಶನ ನೀಡಿದರೆ, ಈ ಇನ್ನಿಂಗ್ಸ್ನಲ್ಲಿ ಜಸ್ಪ್ರೀತ್ ಬುಮ್ರಾ 6 ವಿಕೆಟ್ ಪಡೆದು ಗಮನ ಸೆಳೆದರು. ಇನ್ನುಳಿದಂತೆ ಮುಖೇಶ್ ಕುಮಾರ್ 2 ವಿಕೆಟ್, ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆದರು.
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…
ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…