ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಎರಡೇ ದಿನಕ್ಕೆ ಮುಕ್ತಾಯಗೊಳ್ಳುವ ಹಂತಕ್ಕೆ ಬಂದು ತಲುಪಿದೆ. ಮೊದಲ ಇನ್ನಿಂಗ್ಸ್ನಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಕೇವಲ 55 ರನ್ಗೆ ಆಲ್ಔಟ್ ಆಗಿದ್ದ ದಕ್ಷಿಣ ಆಫ್ರಿಕಾ ಬಳಿಕ ಭಾರತ ತಂಡವನ್ನು 153 ರನ್ಗಳಿಗೆ ಆಲ್ ಔಟ್ ಮಾಡಿತ್ತು.
ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್ ಮುಕ್ತಾಯಕ್ಕೆ 98 ರನ್ಗಳ ಮುನ್ನಡೆಯನ್ನು ಸಾಧಿಸಿತ್ತು. ಸದ್ಯ ತನ್ನ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಅನ್ನು ಮುಗಿಸಿರುವ ಹರಿಣಗಳು 36.5 ಓವರ್ಗಳಲ್ಲಿ 176 ರನ್ಗೆ ಆಲ್ಔಟ್ ಆಗಿದ್ದು, 78 ರನ್ಗಳ ಮುನ್ನಡೆಯನ್ನು ಕಾಯ್ದುಕೊಂಡು ಭಾರತಕ್ಕೆ ಗೆಲ್ಲಲು 79 ರನ್ಗಳ ಗುರಿಯನ್ನು ನೀಡಿದೆ. ಮೊದಲ ಇನ್ನಿಂಗ್ಸ್ ರೀತಿ ಎರಡನೇ ಇನ್ನಿಂಗ್ಸ್ನಲ್ಲಿಯೂ ಸಹ ದಕ್ಷಿಣ ಆಫ್ರಿಕಾ ತೀರ ಅಲ್ಪಮೊತ್ತಕ್ಕೆ ಆಲ್ಔಟ್ ಆಗುವುದನ್ನು ಏಡನ್ ಮಾರ್ಕ್ರಮ್ ತಮ್ಮ ಅಮೋಘ ಶತಕದ ಆಟದಿಂದ ತಪ್ಪಿಸಿದರು. ಮಾರ್ಕ್ರಮ್ 103 ಎಸೆತಗಳಲ್ಲಿ 106 ರನ್ ಗಳಿಸಿದರು.
ಮೊದಲ ಇನ್ನಿಂಗ್ಸ್ನಲ್ಲಿ ಮೊಹಮ್ಮದ್ ಸಿರಾಜ್ 6 ವಿಕೆಟ್ ಪಡೆದು ಉತ್ತಮ ಪ್ರದರ್ಶನ ನೀಡಿದರೆ, ಈ ಇನ್ನಿಂಗ್ಸ್ನಲ್ಲಿ ಜಸ್ಪ್ರೀತ್ ಬುಮ್ರಾ 6 ವಿಕೆಟ್ ಪಡೆದು ಗಮನ ಸೆಳೆದರು. ಇನ್ನುಳಿದಂತೆ ಮುಖೇಶ್ ಕುಮಾರ್ 2 ವಿಕೆಟ್, ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…