BREAKING NEWS

IND vs SA 3rd ODI: ಏಕದಿನ ಸರಣಿ ವಶಪಡಿಸಿಕೊಂಡ ಟೀಮ್‌ ಇಂಡಿಯಾ

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಮ್‌ ಇಂಡಿಯಾ ಮೂರನೇ ಏಕದಿನ ಪಂದ್ಯದಲ್ಲಿ 78 ರನ್‌ಗಳ ಜಯ ಸಾಧಿಸುವ ಮೂಲಕ 3 ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ದುಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತ್ತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಟೀಮ್‌ ಇಂಡಿಯಾ ಸಂಜು ಸ್ಯಾಮ್ಸನ್‌ ಶತಕ ಹಾಗೂ ತಿಲಕ್‌ ವರ್ಮಾ ಅರ್ಧಶತಕದ ನೆರವಿನಿಂದ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 296 ರನ್‌ ಕಲೆಹಾಕಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 297 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾಗಿರುವ ದಕ್ಷಿಣ ಆಫ್ರಿಕಾ 45.5 ಓವರ್‌ಗಳಲ್ಲಿ 218 ರನ್‌ಗಳಿಗೆ ಆಲ್‌ಔಟ್‌ ಆಗಿದ್ದು 78 ರನ್‌ಗಳ ಅಂತರದಿಂದ ಸೋಲನ್ನು ಕಂಡಿದೆ.

ಭಾರತ ಇನ್ನಿಂಗ್ಸ್:‌ ಭಾರತದ ಪರ ಆರಂಭಿಕರಾಗಿ ರಜತ್‌ ಪಟಿದಾರ್‌ 22 ರನ್‌ ಗಳಿಸಿದರೆ, ಸಾಯಿ ಸುದರ್ಶನ್‌ 10 ರನ್‌ ಕಲೆಹಾಕಿದರು. ಸಂಜು ಸ್ಯಾಮ್ಸನ್‌ 114 ಎಸೆತಗಳಲ್ಲಿ 108 ರನ್‌ ಬಾರಿಸಿ ತಮ್ಮ ಅಂತಾರಾಷ್ಟ್ರಿಯ ಕ್ರಿಕೆಟ್‌ ಕೆರಿಯರ್‌ನ ಚೊಚ್ಚಲ ಸೆಂಚುರಿ ಸಿಡಿಸಿ ಉತ್ತಮ ಪ್ರದರ್ಶನ ನೀಡಿದರು. ನಾಯಕ ಕೆಎಲ್‌ ರಾಹುಲ್‌ 21 ರನ್‌, ತಿಲಕ್‌ ವರ್ಮಾ 52 ರನ್‌, ಅಕ್ಷರ್‌ ಪಟೇಲ್‌ 1 ರನ್‌, ವಾಷಿಂಗ್ಟನ್‌ ಸುಂದರ್‌ 14, ರಿಂಕು ಸಿಂಗ್‌ 38, ಅರ್ಷ್‌ದೀಪ್‌ ಸಿಂಗ್‌ ಅಜೇಯ 7 ಹಾಗೂ ಅವೇಶ್‌ ಖಾನ್‌ ಅಜೇಯ 1 ರನ್‌ ಕಲೆಹಾಕಿದರು.

ದಕ್ಷಿಣ ಆಫ್ರಿಕಾ ಪರ ಬ್ಯೂರನ್‌ ಹೆಂಡ್ರಿಕ್ಸ್‌ 3 ವಿಕೆಟ್‌ ಪಡೆದರೆ, ನಾಂಡ್ರೆ ಬರ್ಗರ್‌ 2 ವಿಕೆಟ್‌ ಹಾಗೂ ಲಿಜಾರ್ಡ್‌ ವಿಲಿಯಮ್ಸ್‌, ವಿಯಾನ್‌ ಮಲ್ಡರ್‌ ಮತ್ತು ಕೇಶವ್‌ ಮಹಾರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್:‌ ಭಾರತ ನೀಡಿದ ಗುರಿಯನ್ನು ನೀಡಿದ ಬೆನ್ನಟ್ಟಲು ಯತ್ನಿಸಿದ ದಕ್ಷಿಣ ಆಫ್ರಿಕಾ ಒಳ್ಳೆಯ ಆರಂಭವನ್ನೇ ಪಡೆದುಕೊಂಡಿತು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದ ಟೋನಿ ಡಿ ಝೋರ್ಝಿ ಈ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಜವಾಬ್ದಾರಿಯುತ ಆಟವನ್ನಾಡಿರೂ ತಂಡದ ಇತರೆ ಆಟಗಾರರಿಂದ ದೊಡ್ಡ ಇನ್ನಿಂಗ್ಸ್‌ ಬಾರಲಿಲ್ಲ. ಟೋನಿ ಡಿ ಝೋರ್ಝಿ 81, ರೀಜಾ ಹೆಂಡ್ರಿಕ್ಸ್‌ 19, ರಸ್ಸಿ ವಂಡರ್‌ ಡಸನ್‌ 2, ಏಡನ್‌ ಮಾರ್ಕ್ರಮ್‌ 36, ಹೆನ್‌ರಿಚ್‌ ಕ್ಲಾಸೀನ್‌ 21, ಡೇವಿಡ್‌ ಮಿಲ್ಲರ್‌ 10, ವಿಯಾನ್‌ ಮಲ್ಡರ್‌ 1, ಕೇಶವ್‌ ಮಹಾರಾಜ್‌ 14, ಬ್ಯೂರನ್‌ ಹೆಂಡ್ರಿಕ್ಸ್‌ 18, ಲಿಜಾರ್ಡ್‌ ವಿಲಿಯಮ್ಸ್‌ 2 ಹಾಗೂ ನಾಂದ್ರೆ ಬರ್ಗರ್‌ ಅಜೇಯ ಒಂದು ರನ್‌ ಕಲೆಹಾಕಿದರು.

ಭಾರತದ ಪರ ಅರ್ಷ್‌ದೀಪ್‌ ಸಿಂಗ್‌ ನಾಲ್ಕು ವಿಕೆಟ್‌ ಪಡೆದು ಮಿಂಚಿದರೆ, ಅವೇಶ್‌ ಖಾನ್‌ ಹಾಗೂ ವಾಷಿಂಗ್ಟನ್‌ ಸುಂದರ್‌ ತಲಾ ಎರಡೆರಡು ವಿಕೆಟ್‌ ಮತ್ತು ಮುಖೇಶ್‌ ಕುಮಾರ್‌ ಹಾಗೂ ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

2 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

2 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago