BREAKING NEWS

IND vs SA 3rd ODI: ಸಂಜು ಸ್ಯಾಮ್ಸನ್‌ ಚೊಚ್ಚಲ ಶತಕ; ದ.ಆಫ್ರಿಕಾಗೆ 297 ರನ್‌ಗಳ ಗುರಿ

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ಇಂದು ( ಡಿಸೆಂಬರ್‌ 21 ) ಪಾರ್ಲ್‌ನ ಬೋಲ್ಯಾಂಡ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ನಡೆಯುತ್ತಿದೆ. ಎರಡೂ ತಂಡಗಳೂ ಸಹ ತಲಾ ಒಂದೊಂದು ಪಂದ್ಯದಲ್ಲಿ ಗೆದ್ದಿರುವುದರಿಂದ ಇಂದಿನ ಪಂದ್ಯ ಸರಣಿಯ ಫೈನಲ್‌ ಪಂದ್ಯವಾಗಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ದುಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿದೆ. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿರುವ ಟೀಮ್‌ ಇಂಡಿಯಾ ಸಂಜು ಸ್ಯಾಮ್ಸನ್‌ ಶತಕ ಹಾಗೂ ತಿಲಕ್‌ ವರ್ಮಾ ಅರ್ಧಶತಕದ ನೆರವಿನಿಂದ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 296 ರನ್‌ ಕಲೆಹಾಕಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 297 ರನ್‌ಗಳ ಗುರಿಯನ್ನು ನೀಡಿದೆ.

ಭಾರತದ ಪರ ಆರಂಭಿಕರಾಗಿ ರಜತ್‌ ಪಟಿದಾರ್‌ 22 ರನ್‌ ಗಳಿಸಿದರೆ, ಸಾಯಿ ಸುದರ್ಶನ್‌ 10 ರನ್‌ ಕಲೆಹಾಕಿದರು. ಸಂಜು ಸ್ಯಾಮ್ಸನ್‌ 114 ಎಸೆತಗಳಲ್ಲಿ 108 ರನ್‌ ಬಾರಿಸಿ ತಮ್ಮ ಅಂತಾರಾಷ್ಟ್ರಿಯ ಕ್ರಿಕೆಟ್‌ ಕೆರಿಯರ್‌ನ ಚೊಚ್ಚಲ ಸೆಂಚುರಿ ಸಿಡಿಸಿ ಉತ್ತಮ ಪ್ರದರ್ಶನ ನೀಡಿದರು. ನಾಯಕ ಕೆಎಲ್‌ ರಾಹುಲ್‌ 21 ರನ್‌, ತಿಲಕ್‌ ವರ್ಮಾ 52 ರನ್‌, ಅಕ್ಷರ್‌ ಪಟೇಲ್‌ 1 ರನ್‌, ವಾಷಿಂಗ್ಟನ್‌ ಸುಂದರ್‌ 14, ರಿಂಕು ಸಿಂಗ್‌ 38, ಅರ್ಷ್‌ದೀಪ್‌ ಸಿಂಗ್‌ ಅಜೇಯ 7 ಹಾಗೂ ಅವೇಶ್‌ ಖಾನ್‌ ಅಜೇಯ 1 ರನ್‌ ಕಲೆಹಾಕಿದರು.

ದಕ್ಷಿಣ ಆಫ್ರಿಕಾ ಪರ ಬ್ಯೂರನ್‌ ಹೆಂಡ್ರಿಕ್ಸ್‌ 3 ವಿಕೆಟ್‌ ಪಡೆದರೆ, ನಾಂಡ್ರೆ ಬರ್ಗರ್‌ 2 ವಿಕೆಟ್‌ ಹಾಗೂ ಲಿಜಾರ್ಡ್‌ ವಿಲಿಯಮ್ಸ್‌, ವಿಯಾನ್‌ ಮಲ್ಡರ್‌ ಮತ್ತು ಕೇಶವ್‌ ಮಹಾರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಸಾರ್ವಜನಿಕ ಶೌಚಾಲಯ ‘ಎರಡೂ’ ಬಂದ್!

ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…

30 mins ago

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

3 hours ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

3 hours ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

3 hours ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

3 hours ago