ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ಇಂದು ( ಡಿಸೆಂಬರ್ 21 ) ಪಾರ್ಲ್ನ ಬೋಲ್ಯಾಂಡ್ ಪಾರ್ಕ್ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ನಡೆಯುತ್ತಿದೆ. ಎರಡೂ ತಂಡಗಳೂ ಸಹ ತಲಾ ಒಂದೊಂದು ಪಂದ್ಯದಲ್ಲಿ ಗೆದ್ದಿರುವುದರಿಂದ ಇಂದಿನ ಪಂದ್ಯ ಸರಣಿಯ ಫೈನಲ್ ಪಂದ್ಯವಾಗಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಟೀಮ್ ಇಂಡಿಯಾ ಸಂಜು ಸ್ಯಾಮ್ಸನ್ ಶತಕ ಹಾಗೂ ತಿಲಕ್ ವರ್ಮಾ ಅರ್ಧಶತಕದ ನೆರವಿನಿಂದ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 296 ರನ್ ಕಲೆಹಾಕಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 297 ರನ್ಗಳ ಗುರಿಯನ್ನು ನೀಡಿದೆ.
ಭಾರತದ ಪರ ಆರಂಭಿಕರಾಗಿ ರಜತ್ ಪಟಿದಾರ್ 22 ರನ್ ಗಳಿಸಿದರೆ, ಸಾಯಿ ಸುದರ್ಶನ್ 10 ರನ್ ಕಲೆಹಾಕಿದರು. ಸಂಜು ಸ್ಯಾಮ್ಸನ್ 114 ಎಸೆತಗಳಲ್ಲಿ 108 ರನ್ ಬಾರಿಸಿ ತಮ್ಮ ಅಂತಾರಾಷ್ಟ್ರಿಯ ಕ್ರಿಕೆಟ್ ಕೆರಿಯರ್ನ ಚೊಚ್ಚಲ ಸೆಂಚುರಿ ಸಿಡಿಸಿ ಉತ್ತಮ ಪ್ರದರ್ಶನ ನೀಡಿದರು. ನಾಯಕ ಕೆಎಲ್ ರಾಹುಲ್ 21 ರನ್, ತಿಲಕ್ ವರ್ಮಾ 52 ರನ್, ಅಕ್ಷರ್ ಪಟೇಲ್ 1 ರನ್, ವಾಷಿಂಗ್ಟನ್ ಸುಂದರ್ 14, ರಿಂಕು ಸಿಂಗ್ 38, ಅರ್ಷ್ದೀಪ್ ಸಿಂಗ್ ಅಜೇಯ 7 ಹಾಗೂ ಅವೇಶ್ ಖಾನ್ ಅಜೇಯ 1 ರನ್ ಕಲೆಹಾಕಿದರು.
ದಕ್ಷಿಣ ಆಫ್ರಿಕಾ ಪರ ಬ್ಯೂರನ್ ಹೆಂಡ್ರಿಕ್ಸ್ 3 ವಿಕೆಟ್ ಪಡೆದರೆ, ನಾಂಡ್ರೆ ಬರ್ಗರ್ 2 ವಿಕೆಟ್ ಹಾಗೂ ಲಿಜಾರ್ಡ್ ವಿಲಿಯಮ್ಸ್, ವಿಯಾನ್ ಮಲ್ಡರ್ ಮತ್ತು ಕೇಶವ್ ಮಹಾರಾಜ್ ತಲಾ ಒಂದೊಂದು ವಿಕೆಟ್ ಪಡೆದರು.
ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…
ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…
ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…
ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…
ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…
ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್…