ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ಇಂದು ( ಡಿಸೆಂಬರ್ 21 ) ಪಾರ್ಲ್ನ ಬೋಲ್ಯಾಂಡ್ ಪಾರ್ಕ್ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ನಡೆಯುತ್ತಿದೆ. ಎರಡೂ ತಂಡಗಳೂ ಸಹ ತಲಾ ಒಂದೊಂದು ಪಂದ್ಯದಲ್ಲಿ ಗೆದ್ದಿರುವುದರಿಂದ ಇಂದಿನ ಪಂದ್ಯ ಸರಣಿಯ ಫೈನಲ್ ಪಂದ್ಯವಾಗಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಟೀಮ್ ಇಂಡಿಯಾ ಸಂಜು ಸ್ಯಾಮ್ಸನ್ ಶತಕ ಹಾಗೂ ತಿಲಕ್ ವರ್ಮಾ ಅರ್ಧಶತಕದ ನೆರವಿನಿಂದ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 296 ರನ್ ಕಲೆಹಾಕಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 297 ರನ್ಗಳ ಗುರಿಯನ್ನು ನೀಡಿದೆ.
ಭಾರತದ ಪರ ಆರಂಭಿಕರಾಗಿ ರಜತ್ ಪಟಿದಾರ್ 22 ರನ್ ಗಳಿಸಿದರೆ, ಸಾಯಿ ಸುದರ್ಶನ್ 10 ರನ್ ಕಲೆಹಾಕಿದರು. ಸಂಜು ಸ್ಯಾಮ್ಸನ್ 114 ಎಸೆತಗಳಲ್ಲಿ 108 ರನ್ ಬಾರಿಸಿ ತಮ್ಮ ಅಂತಾರಾಷ್ಟ್ರಿಯ ಕ್ರಿಕೆಟ್ ಕೆರಿಯರ್ನ ಚೊಚ್ಚಲ ಸೆಂಚುರಿ ಸಿಡಿಸಿ ಉತ್ತಮ ಪ್ರದರ್ಶನ ನೀಡಿದರು. ನಾಯಕ ಕೆಎಲ್ ರಾಹುಲ್ 21 ರನ್, ತಿಲಕ್ ವರ್ಮಾ 52 ರನ್, ಅಕ್ಷರ್ ಪಟೇಲ್ 1 ರನ್, ವಾಷಿಂಗ್ಟನ್ ಸುಂದರ್ 14, ರಿಂಕು ಸಿಂಗ್ 38, ಅರ್ಷ್ದೀಪ್ ಸಿಂಗ್ ಅಜೇಯ 7 ಹಾಗೂ ಅವೇಶ್ ಖಾನ್ ಅಜೇಯ 1 ರನ್ ಕಲೆಹಾಕಿದರು.
ದಕ್ಷಿಣ ಆಫ್ರಿಕಾ ಪರ ಬ್ಯೂರನ್ ಹೆಂಡ್ರಿಕ್ಸ್ 3 ವಿಕೆಟ್ ಪಡೆದರೆ, ನಾಂಡ್ರೆ ಬರ್ಗರ್ 2 ವಿಕೆಟ್ ಹಾಗೂ ಲಿಜಾರ್ಡ್ ವಿಲಿಯಮ್ಸ್, ವಿಯಾನ್ ಮಲ್ಡರ್ ಮತ್ತು ಕೇಶವ್ ಮಹಾರಾಜ್ ತಲಾ ಒಂದೊಂದು ವಿಕೆಟ್ ಪಡೆದರು.
ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ…
ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡೇ ಹರಿದು…
ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…
ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…
ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…