BREAKING NEWS

IND vs SA 3rd ODI: ಸಂಜು ಸ್ಯಾಮ್ಸನ್‌ ಚೊಚ್ಚಲ ಶತಕ; ದ.ಆಫ್ರಿಕಾಗೆ 297 ರನ್‌ಗಳ ಗುರಿ

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ಇಂದು ( ಡಿಸೆಂಬರ್‌ 21 ) ಪಾರ್ಲ್‌ನ ಬೋಲ್ಯಾಂಡ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ನಡೆಯುತ್ತಿದೆ. ಎರಡೂ ತಂಡಗಳೂ ಸಹ ತಲಾ ಒಂದೊಂದು ಪಂದ್ಯದಲ್ಲಿ ಗೆದ್ದಿರುವುದರಿಂದ ಇಂದಿನ ಪಂದ್ಯ ಸರಣಿಯ ಫೈನಲ್‌ ಪಂದ್ಯವಾಗಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ದುಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿದೆ. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿರುವ ಟೀಮ್‌ ಇಂಡಿಯಾ ಸಂಜು ಸ್ಯಾಮ್ಸನ್‌ ಶತಕ ಹಾಗೂ ತಿಲಕ್‌ ವರ್ಮಾ ಅರ್ಧಶತಕದ ನೆರವಿನಿಂದ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 296 ರನ್‌ ಕಲೆಹಾಕಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 297 ರನ್‌ಗಳ ಗುರಿಯನ್ನು ನೀಡಿದೆ.

ಭಾರತದ ಪರ ಆರಂಭಿಕರಾಗಿ ರಜತ್‌ ಪಟಿದಾರ್‌ 22 ರನ್‌ ಗಳಿಸಿದರೆ, ಸಾಯಿ ಸುದರ್ಶನ್‌ 10 ರನ್‌ ಕಲೆಹಾಕಿದರು. ಸಂಜು ಸ್ಯಾಮ್ಸನ್‌ 114 ಎಸೆತಗಳಲ್ಲಿ 108 ರನ್‌ ಬಾರಿಸಿ ತಮ್ಮ ಅಂತಾರಾಷ್ಟ್ರಿಯ ಕ್ರಿಕೆಟ್‌ ಕೆರಿಯರ್‌ನ ಚೊಚ್ಚಲ ಸೆಂಚುರಿ ಸಿಡಿಸಿ ಉತ್ತಮ ಪ್ರದರ್ಶನ ನೀಡಿದರು. ನಾಯಕ ಕೆಎಲ್‌ ರಾಹುಲ್‌ 21 ರನ್‌, ತಿಲಕ್‌ ವರ್ಮಾ 52 ರನ್‌, ಅಕ್ಷರ್‌ ಪಟೇಲ್‌ 1 ರನ್‌, ವಾಷಿಂಗ್ಟನ್‌ ಸುಂದರ್‌ 14, ರಿಂಕು ಸಿಂಗ್‌ 38, ಅರ್ಷ್‌ದೀಪ್‌ ಸಿಂಗ್‌ ಅಜೇಯ 7 ಹಾಗೂ ಅವೇಶ್‌ ಖಾನ್‌ ಅಜೇಯ 1 ರನ್‌ ಕಲೆಹಾಕಿದರು.

ದಕ್ಷಿಣ ಆಫ್ರಿಕಾ ಪರ ಬ್ಯೂರನ್‌ ಹೆಂಡ್ರಿಕ್ಸ್‌ 3 ವಿಕೆಟ್‌ ಪಡೆದರೆ, ನಾಂಡ್ರೆ ಬರ್ಗರ್‌ 2 ವಿಕೆಟ್‌ ಹಾಗೂ ಲಿಜಾರ್ಡ್‌ ವಿಲಿಯಮ್ಸ್‌, ವಿಯಾನ್‌ ಮಲ್ಡರ್‌ ಮತ್ತು ಕೇಶವ್‌ ಮಹಾರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

6 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

7 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

11 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

12 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

13 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

14 hours ago