BREAKING NEWS

ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಗೆದ್ದ ಭಾರತ ವನಿತೆಯರ ತಂಡ

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವನಿತೆಯರ ಕ್ರಿಕೆಟ್‌ ತಂಡ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ ಏಕೈಕ ಟೆಸ್ಟ್‌ ಪಂದ್ಯವನ್ನು ಆಡಿದೆ. ಮೊದಲಿಗೆ ನಡೆದ ಟಿ ಟ್ವೆಂಟಿ ಸರಣಿಯಲ್ಲಿ 1-2 ಅಂತರದಿಂದ ಸೋತ ಭಾರತೀಯ ವನಿತೆಯರು ಇದೀಗ ಟೆಸ್ಟ್‌ ಪಂದ್ಯವನ್ನು ಗೆಲ್ಲುವ ಮೂಲಕ ಟಿ ಟ್ವೆಂಟಿ ಸರಣಿ ಸೋಲಿಗೆ ಪ್ರತೀಕಾರ ತೀರಿಸಿಕೊಂಡಿದೆ.‌

ಡಿಸೆಂಬರ್‌ 14ರಂದು ಮುಂಬೈನ ಡಿವೈ ಪಾಟೀಲ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಆರಂಭವಾದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಮಧ್ಯಮ ಕ್ರಮಾಂಕದ ಎಲ್ಲಾ ಆಟಗಾರರ ಅಮೋಘ ಪ್ರದರ್ಶನದ ನೆರವಿನಿಂದ 104.3 ಓವರ್‌ಗಳಲ್ಲಿ 428 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು.

ಇಂಗ್ಲೆಂಡ್‌ ವನಿತೆಯರ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 136 ರನ್‌ಗಳಿಗೆ ಆಲ್‌ಔಟ್‌ ಆಯಿತು. ಈ ಇನ್ನಿಂಗ್ಸ್‌ನಲ್ಲಿ ಭಾರತದ ದೀಪ್ತಿ ಶರ್ಮಾ ಐದು ವಿಕೆಟ್‌ಗಳ ಗೊಂಚಲನ್ನು ಪಡೆದರು. ಮೊದಲ ಇನ್ನಿಂಗ್ಸ್‌ನಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಭಾರತದ ವನಿತೆಯರು 292 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತು.

ಬಳಿಕ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 42 ಓವರ್‌ಗಳಿಗೆ 6 ವಿಕೆಟ್‌ ಕಳೆದುಕೊಂಡು 186 ರನ್‌ ಗಳಿಸಿದ ಭಾರತೀಯ ವನಿತೆಯರು ಲೀಡ್‌ ಸೇರಿದಂತೆ ಒಟ್ಟು 478 ರನ್‌ ಕಲೆಹಾಕಿ ಎದುರಾಳಿ ಇಂಗ್ಲೆಂಡ್‌ ತಂಡಕ್ಕೆ ಗೆಲ್ಲಲು 479 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಇಂಗ್ಲೆಂಡ್‌ ವನಿತೆಯರು ಮೊದಲ ಇನ್ನಿಂಗ್ಸ್‌ ರೀತಿಯೇ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಸಹ ರನ್‌ ಗಳಿಸಲು ಪರದಾಡಿದರು. 27.3 ಓವರ್‌ಗಳಲ್ಲಿ ಕೇವಲ 131 ರನ್‌ ಕಲೆಹಾಕಿ ಆಲ್‌ಔಟ್‌ ಆದರು. ಈ ಮೂಲಕ ಭಾರತ 347 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿತು.

 

andolana

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

31 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

36 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

45 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago