BREAKING NEWS

ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಗೆದ್ದ ಭಾರತ ವನಿತೆಯರ ತಂಡ

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವನಿತೆಯರ ಕ್ರಿಕೆಟ್‌ ತಂಡ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ ಏಕೈಕ ಟೆಸ್ಟ್‌ ಪಂದ್ಯವನ್ನು ಆಡಿದೆ. ಮೊದಲಿಗೆ ನಡೆದ ಟಿ ಟ್ವೆಂಟಿ ಸರಣಿಯಲ್ಲಿ 1-2 ಅಂತರದಿಂದ ಸೋತ ಭಾರತೀಯ ವನಿತೆಯರು ಇದೀಗ ಟೆಸ್ಟ್‌ ಪಂದ್ಯವನ್ನು ಗೆಲ್ಲುವ ಮೂಲಕ ಟಿ ಟ್ವೆಂಟಿ ಸರಣಿ ಸೋಲಿಗೆ ಪ್ರತೀಕಾರ ತೀರಿಸಿಕೊಂಡಿದೆ.‌

ಡಿಸೆಂಬರ್‌ 14ರಂದು ಮುಂಬೈನ ಡಿವೈ ಪಾಟೀಲ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಆರಂಭವಾದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಮಧ್ಯಮ ಕ್ರಮಾಂಕದ ಎಲ್ಲಾ ಆಟಗಾರರ ಅಮೋಘ ಪ್ರದರ್ಶನದ ನೆರವಿನಿಂದ 104.3 ಓವರ್‌ಗಳಲ್ಲಿ 428 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು.

ಇಂಗ್ಲೆಂಡ್‌ ವನಿತೆಯರ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 136 ರನ್‌ಗಳಿಗೆ ಆಲ್‌ಔಟ್‌ ಆಯಿತು. ಈ ಇನ್ನಿಂಗ್ಸ್‌ನಲ್ಲಿ ಭಾರತದ ದೀಪ್ತಿ ಶರ್ಮಾ ಐದು ವಿಕೆಟ್‌ಗಳ ಗೊಂಚಲನ್ನು ಪಡೆದರು. ಮೊದಲ ಇನ್ನಿಂಗ್ಸ್‌ನಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಭಾರತದ ವನಿತೆಯರು 292 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತು.

ಬಳಿಕ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 42 ಓವರ್‌ಗಳಿಗೆ 6 ವಿಕೆಟ್‌ ಕಳೆದುಕೊಂಡು 186 ರನ್‌ ಗಳಿಸಿದ ಭಾರತೀಯ ವನಿತೆಯರು ಲೀಡ್‌ ಸೇರಿದಂತೆ ಒಟ್ಟು 478 ರನ್‌ ಕಲೆಹಾಕಿ ಎದುರಾಳಿ ಇಂಗ್ಲೆಂಡ್‌ ತಂಡಕ್ಕೆ ಗೆಲ್ಲಲು 479 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಇಂಗ್ಲೆಂಡ್‌ ವನಿತೆಯರು ಮೊದಲ ಇನ್ನಿಂಗ್ಸ್‌ ರೀತಿಯೇ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಸಹ ರನ್‌ ಗಳಿಸಲು ಪರದಾಡಿದರು. 27.3 ಓವರ್‌ಗಳಲ್ಲಿ ಕೇವಲ 131 ರನ್‌ ಕಲೆಹಾಕಿ ಆಲ್‌ಔಟ್‌ ಆದರು. ಈ ಮೂಲಕ ಭಾರತ 347 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿತು.

 

andolana

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago