BREAKING NEWS

ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಗೆದ್ದ ಭಾರತ ವನಿತೆಯರ ತಂಡ

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವನಿತೆಯರ ಕ್ರಿಕೆಟ್‌ ತಂಡ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ ಏಕೈಕ ಟೆಸ್ಟ್‌ ಪಂದ್ಯವನ್ನು ಆಡಿದೆ. ಮೊದಲಿಗೆ ನಡೆದ ಟಿ ಟ್ವೆಂಟಿ ಸರಣಿಯಲ್ಲಿ 1-2 ಅಂತರದಿಂದ ಸೋತ ಭಾರತೀಯ ವನಿತೆಯರು ಇದೀಗ ಟೆಸ್ಟ್‌ ಪಂದ್ಯವನ್ನು ಗೆಲ್ಲುವ ಮೂಲಕ ಟಿ ಟ್ವೆಂಟಿ ಸರಣಿ ಸೋಲಿಗೆ ಪ್ರತೀಕಾರ ತೀರಿಸಿಕೊಂಡಿದೆ.‌

ಡಿಸೆಂಬರ್‌ 14ರಂದು ಮುಂಬೈನ ಡಿವೈ ಪಾಟೀಲ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಆರಂಭವಾದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಮಧ್ಯಮ ಕ್ರಮಾಂಕದ ಎಲ್ಲಾ ಆಟಗಾರರ ಅಮೋಘ ಪ್ರದರ್ಶನದ ನೆರವಿನಿಂದ 104.3 ಓವರ್‌ಗಳಲ್ಲಿ 428 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು.

ಇಂಗ್ಲೆಂಡ್‌ ವನಿತೆಯರ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 136 ರನ್‌ಗಳಿಗೆ ಆಲ್‌ಔಟ್‌ ಆಯಿತು. ಈ ಇನ್ನಿಂಗ್ಸ್‌ನಲ್ಲಿ ಭಾರತದ ದೀಪ್ತಿ ಶರ್ಮಾ ಐದು ವಿಕೆಟ್‌ಗಳ ಗೊಂಚಲನ್ನು ಪಡೆದರು. ಮೊದಲ ಇನ್ನಿಂಗ್ಸ್‌ನಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಭಾರತದ ವನಿತೆಯರು 292 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತು.

ಬಳಿಕ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 42 ಓವರ್‌ಗಳಿಗೆ 6 ವಿಕೆಟ್‌ ಕಳೆದುಕೊಂಡು 186 ರನ್‌ ಗಳಿಸಿದ ಭಾರತೀಯ ವನಿತೆಯರು ಲೀಡ್‌ ಸೇರಿದಂತೆ ಒಟ್ಟು 478 ರನ್‌ ಕಲೆಹಾಕಿ ಎದುರಾಳಿ ಇಂಗ್ಲೆಂಡ್‌ ತಂಡಕ್ಕೆ ಗೆಲ್ಲಲು 479 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಇಂಗ್ಲೆಂಡ್‌ ವನಿತೆಯರು ಮೊದಲ ಇನ್ನಿಂಗ್ಸ್‌ ರೀತಿಯೇ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಸಹ ರನ್‌ ಗಳಿಸಲು ಪರದಾಡಿದರು. 27.3 ಓವರ್‌ಗಳಲ್ಲಿ ಕೇವಲ 131 ರನ್‌ ಕಲೆಹಾಕಿ ಆಲ್‌ಔಟ್‌ ಆದರು. ಈ ಮೂಲಕ ಭಾರತ 347 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿತು.

 

andolana

Recent Posts

ಮೈಸೂರು | ಶಿಷ್ಯ ವೇತನಕ್ಕೆ ಒತ್ತಾಯಿಸಿ ಸಂಶೋಧಕರ ಅಹೋರಾತ್ರಿ ಧರಣಿ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಪ್ರವೇಶಾತಿ ಪಡೆದ ಸಂಶೋಧಕರುಗಳಿಗೆ ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ…

6 hours ago

ಚಾಮರಾಜನಗರ | ಬಾಗಳಿ ಸಮೀಪ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ…

7 hours ago

ಅಮೆರಿಕ-ಇರಾನ್ ಶಾಂತಿ ಒಪ್ಪಂದ : ಕಚ್ಚಾ ತೈಲ ಬೆಲೆ ಭಾರೀ ಇಳಿಕೆ

ವಾಷಿಂಗ್ಟನ್ : ಅಮೆರಿಕ-ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್…

7 hours ago

ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಮೋಹನ್‌ ಭಾಗವತ್‌ಗೆ ಪ್ರಿಯಾಂಕ್‌ ಖರ್ಗೆ ಪತ್ರ ; ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿದ ಗೃಹ ಸಚಿವ!

ಬೆಂಗಳೂರು : ಆರ್‌ಎಸ್‌ಎಸ್‌ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು…

9 hours ago

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

11 hours ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

14 hours ago