ವಾಷಿಂಗ್ಟನ್ : ದೇಶದ ಆರ್ಥಿಕ ವ್ಯವಸ್ಥೆಯು ಯುಎಸ್ ಮತ್ತು ಸ್ವಿಟ್ಜರ್ಲ್ಯಾಂಡ್ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಸಂಪೂರ್ಣವಾಗಿ ಪ್ರತ್ಯೇಕಿಸಲ್ಪಟ್ಟಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಗವರ್ನರ್ ಶಕ್ತಿಕಾಂತ್ ದಾಸ್ ಅಭಿಪ್ರಾಯಪಟ್ಟಿದ್ದಾರೆ.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಾಸ್, ಯುಎಸ್ ಹಾಗೂ ಸ್ವಿಟ್ಜರ್ಲ್ಯಾಂಡ್ನ ಬ್ಯಾಂಕಿಂಗ್ ವ್ಯವಸ್ಥೆಯಲ್ಲಾದ ಇತ್ತೀಚಿನ ಬೆಳವಣಿಗೆಗಳು, ಮತ್ತೊಮ್ಮೆ ಆರ್ಥಿಕ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯ ಸ್ಥಿರತೆಯ ಪ್ರಾಮುಖ್ಯತೆಯತ್ತ ದೃಷ್ಟಿ ಹರಿಸುವಂತೆ ಮಾಡಿವೆ ಎಂದಿದ್ದಾರೆ.
ಆರ್ಬಿಐ ಗವರ್ನರ್ ಅವರು, ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ಹಾಗೂ ವಿಶ್ವಬ್ಯಾಂಕ್ನ ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಇಲ್ಲಿಗೆ ಆಗಮಿಸಿದ್ದಾರೆ.
ಯುಎಸ್ ಮೂಲದ ಸಿಲಿಕಾನ್ ವ್ಯಾಲಿ ಬ್ಯಾಂಕ್ ದಿವಾಳಿಯಾದ ಬಗ್ಗೆ ಎದುರಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ದಾಸ್, ‘ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆ, ಭಾರತೀಯ ಹಣಕಾಸು ವ್ಯವಸ್ಥೆಯು ಯುಎಸ್ ಅಥವಾ ಸ್ವಿಟ್ಜರ್ಲ್ಯಾಂಡ್ನಲ್ಲಿನ ನಡೆದ ಬೆಳವಣಿಗೆಗಳಿಂದ ಸಂಪೂರ್ಣವಾಗಿ ಪ್ರತ್ಯೇಕಿಸಲ್ಪಟ್ಟಿದೆ. ನಮ್ಮ ಬ್ಯಾಂಕಿಂಗ್ ವ್ಯವಸ್ಥೆಯು ಸ್ಥಿತಿಸ್ಥಾಪಕ, ಸ್ಥಿರ ಮತ್ತು ಆರೋಗ್ಯಕರವಾಗಿದೆ’ ಎಂದು ಪ್ರತಿಪಾದಿಸಿದ್ದಾರೆ.
‘ಬ್ಯಾಂಕಿಂಗ್ಗೆ ಸಂಬಂಧಿಸಿದ ಮಾನದಂಡಗಳು, ಅದು ಬಂಡವಾಳ ಸಮರ್ಪಕತೆ ಇರಬಹುದು ಅಥವಾ ಸ್ವತ್ತುಗಳ ಶೇಕಡಾವಾರು ಪ್ರಮಾಣವಾಗಿರಬಹುದು. ಇಲ್ಲವೇ, ವೈಯಕ್ತಿಕ ಮಟ್ಟದಲ್ಲಿ ಮತ್ತು ವ್ಯವಸ್ಥಿತ ಮಟ್ಟದಲ್ಲಿ ಬ್ಯಾಂಕ್ಗಳ ದ್ರವ್ಯತೆ ವ್ಯಾಪ್ತಿಯ ಅನುಪಾತವಾಗಿರಲಿ, ಬ್ಯಾಂಕುಗಳ ಲಾಭದಾಯಕತೆ ಅಥವಾ ಯಾವುದೇ ಇರಲಿ. ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆಯು ತುಂಬಾ ಆರೋಗ್ಯಕರವಾಗಿ ಮುಂದುವರಿಯುತ್ತದೆ’ ಎಂದಿದ್ದಾರೆ.
‘ನಾವು ಬ್ಯಾಂಕೇತರ ಹಣಕಾಸು ಸಂಸ್ಥೆಗಳೂ ಸೇರಿದಂತೆ ಸಂಪೂರ್ಣ ಬ್ಯಾಂಕಿಂಗ್ ವ್ಯವಸ್ಥೆ ಮೇಲಿನ ನಿಯಂತ್ರಣ ಮತ್ತು ಮೇಲ್ವಿಚಾರಣೆಯನ್ನು ಗಮನಾರ್ಹವಾಗಿ ಸುಧಾರಿಸಿದ್ದೇವೆ ಮತ್ತು ಬಿಗಿಗೊಳಿಸಿದ್ದೇವೆ’ ಎಂದು ತಿಳಿಸಿದ್ದಾರೆ.
ಬಿಕ್ಕಟ್ಟು ಸೃಷ್ಟಿಯಾಗುವ ವರೆಗೆ ಕಾಯುವ ಬದಲು, ದೋಷಗಳನ್ನು ಮೊದಲೇ ಗುರುತಿಸುವುದು ಮೇಲ್ವಿಚಾರಣೆಯ ಆದ್ಯತೆಯಾಗಿರುತ್ತದೆ ಎಂದೂ ದಾಸ್ ಹೇಳಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…