ವಾಷಿಂಗ್ಟನ್ : ದೇಶದ ಆರ್ಥಿಕ ವ್ಯವಸ್ಥೆಯು ಯುಎಸ್ ಮತ್ತು ಸ್ವಿಟ್ಜರ್ಲ್ಯಾಂಡ್ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಸಂಪೂರ್ಣವಾಗಿ ಪ್ರತ್ಯೇಕಿಸಲ್ಪಟ್ಟಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಗವರ್ನರ್ ಶಕ್ತಿಕಾಂತ್ ದಾಸ್ ಅಭಿಪ್ರಾಯಪಟ್ಟಿದ್ದಾರೆ.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಾಸ್, ಯುಎಸ್ ಹಾಗೂ ಸ್ವಿಟ್ಜರ್ಲ್ಯಾಂಡ್ನ ಬ್ಯಾಂಕಿಂಗ್ ವ್ಯವಸ್ಥೆಯಲ್ಲಾದ ಇತ್ತೀಚಿನ ಬೆಳವಣಿಗೆಗಳು, ಮತ್ತೊಮ್ಮೆ ಆರ್ಥಿಕ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯ ಸ್ಥಿರತೆಯ ಪ್ರಾಮುಖ್ಯತೆಯತ್ತ ದೃಷ್ಟಿ ಹರಿಸುವಂತೆ ಮಾಡಿವೆ ಎಂದಿದ್ದಾರೆ.
ಆರ್ಬಿಐ ಗವರ್ನರ್ ಅವರು, ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ಹಾಗೂ ವಿಶ್ವಬ್ಯಾಂಕ್ನ ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಇಲ್ಲಿಗೆ ಆಗಮಿಸಿದ್ದಾರೆ.
ಯುಎಸ್ ಮೂಲದ ಸಿಲಿಕಾನ್ ವ್ಯಾಲಿ ಬ್ಯಾಂಕ್ ದಿವಾಳಿಯಾದ ಬಗ್ಗೆ ಎದುರಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ದಾಸ್, ‘ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆ, ಭಾರತೀಯ ಹಣಕಾಸು ವ್ಯವಸ್ಥೆಯು ಯುಎಸ್ ಅಥವಾ ಸ್ವಿಟ್ಜರ್ಲ್ಯಾಂಡ್ನಲ್ಲಿನ ನಡೆದ ಬೆಳವಣಿಗೆಗಳಿಂದ ಸಂಪೂರ್ಣವಾಗಿ ಪ್ರತ್ಯೇಕಿಸಲ್ಪಟ್ಟಿದೆ. ನಮ್ಮ ಬ್ಯಾಂಕಿಂಗ್ ವ್ಯವಸ್ಥೆಯು ಸ್ಥಿತಿಸ್ಥಾಪಕ, ಸ್ಥಿರ ಮತ್ತು ಆರೋಗ್ಯಕರವಾಗಿದೆ’ ಎಂದು ಪ್ರತಿಪಾದಿಸಿದ್ದಾರೆ.
‘ಬ್ಯಾಂಕಿಂಗ್ಗೆ ಸಂಬಂಧಿಸಿದ ಮಾನದಂಡಗಳು, ಅದು ಬಂಡವಾಳ ಸಮರ್ಪಕತೆ ಇರಬಹುದು ಅಥವಾ ಸ್ವತ್ತುಗಳ ಶೇಕಡಾವಾರು ಪ್ರಮಾಣವಾಗಿರಬಹುದು. ಇಲ್ಲವೇ, ವೈಯಕ್ತಿಕ ಮಟ್ಟದಲ್ಲಿ ಮತ್ತು ವ್ಯವಸ್ಥಿತ ಮಟ್ಟದಲ್ಲಿ ಬ್ಯಾಂಕ್ಗಳ ದ್ರವ್ಯತೆ ವ್ಯಾಪ್ತಿಯ ಅನುಪಾತವಾಗಿರಲಿ, ಬ್ಯಾಂಕುಗಳ ಲಾಭದಾಯಕತೆ ಅಥವಾ ಯಾವುದೇ ಇರಲಿ. ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆಯು ತುಂಬಾ ಆರೋಗ್ಯಕರವಾಗಿ ಮುಂದುವರಿಯುತ್ತದೆ’ ಎಂದಿದ್ದಾರೆ.
‘ನಾವು ಬ್ಯಾಂಕೇತರ ಹಣಕಾಸು ಸಂಸ್ಥೆಗಳೂ ಸೇರಿದಂತೆ ಸಂಪೂರ್ಣ ಬ್ಯಾಂಕಿಂಗ್ ವ್ಯವಸ್ಥೆ ಮೇಲಿನ ನಿಯಂತ್ರಣ ಮತ್ತು ಮೇಲ್ವಿಚಾರಣೆಯನ್ನು ಗಮನಾರ್ಹವಾಗಿ ಸುಧಾರಿಸಿದ್ದೇವೆ ಮತ್ತು ಬಿಗಿಗೊಳಿಸಿದ್ದೇವೆ’ ಎಂದು ತಿಳಿಸಿದ್ದಾರೆ.
ಬಿಕ್ಕಟ್ಟು ಸೃಷ್ಟಿಯಾಗುವ ವರೆಗೆ ಕಾಯುವ ಬದಲು, ದೋಷಗಳನ್ನು ಮೊದಲೇ ಗುರುತಿಸುವುದು ಮೇಲ್ವಿಚಾರಣೆಯ ಆದ್ಯತೆಯಾಗಿರುತ್ತದೆ ಎಂದೂ ದಾಸ್ ಹೇಳಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…