BREAKING NEWS

ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಸದೃಢ : ಆರ್‌ಬಿಐ ಗವರ್ನರ್

ವಾಷಿಂಗ್ಟನ್‌ : ದೇಶದ ಆರ್ಥಿಕ ವ್ಯವಸ್ಥೆಯು ಯುಎಸ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಸಂಪೂರ್ಣವಾಗಿ ಪ್ರತ್ಯೇಕಿಸಲ್ಪಟ್ಟಿದೆ ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ) ಗವರ್ನರ್ ಶಕ್ತಿಕಾಂತ್‌ ದಾಸ್‌ ಅಭಿಪ್ರಾಯಪಟ್ಟಿದ್ದಾರೆ.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಾಸ್‌, ಯುಎಸ್‌ ಹಾಗೂ ಸ್ವಿಟ್ಜರ್‌ಲ್ಯಾಂಡ್‌ನ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಾದ ಇತ್ತೀಚಿನ ಬೆಳವಣಿಗೆಗಳು, ಮತ್ತೊಮ್ಮೆ ಆರ್ಥಿಕ ಮತ್ತು ಬ್ಯಾಂಕಿಂಗ್‌ ವ್ಯವಸ್ಥೆಯ ಸ್ಥಿರತೆಯ ಪ್ರಾಮುಖ್ಯತೆಯತ್ತ ದೃಷ್ಟಿ ಹರಿಸುವಂತೆ ಮಾಡಿವೆ ಎಂದಿದ್ದಾರೆ.

ಆರ್‌ಬಿಐ ಗವರ್ನರ್ ಅವರು, ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್‌) ಹಾಗೂ ವಿಶ್ವಬ್ಯಾಂಕ್‌ನ ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರೊಂದಿಗೆ ಇಲ್ಲಿಗೆ ಆಗಮಿಸಿದ್ದಾರೆ.

ಯುಎಸ್‌ ಮೂಲದ ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ ದಿವಾಳಿಯಾದ ಬಗ್ಗೆ ಎದುರಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ದಾಸ್‌, ‘ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆ, ಭಾರತೀಯ ಹಣಕಾಸು ವ್ಯವಸ್ಥೆಯು ಯುಎಸ್ ಅಥವಾ ಸ್ವಿಟ್ಜರ್‌ಲ್ಯಾಂಡ್‌ನಲ್ಲಿನ ನಡೆದ ಬೆಳವಣಿಗೆಗಳಿಂದ ಸಂಪೂರ್ಣವಾಗಿ ಪ್ರತ್ಯೇಕಿಸಲ್ಪಟ್ಟಿದೆ. ನಮ್ಮ ಬ್ಯಾಂಕಿಂಗ್ ವ್ಯವಸ್ಥೆಯು ಸ್ಥಿತಿಸ್ಥಾಪಕ, ಸ್ಥಿರ ಮತ್ತು ಆರೋಗ್ಯಕರವಾಗಿದೆ’ ಎಂದು ಪ್ರತಿಪಾದಿಸಿದ್ದಾರೆ.

‘ಬ್ಯಾಂಕಿಂಗ್‌ಗೆ ಸಂಬಂಧಿಸಿದ ಮಾನದಂಡಗಳು, ಅದು ಬಂಡವಾಳ ಸಮರ್ಪಕತೆ ಇರಬಹುದು ಅಥವಾ ಸ್ವತ್ತುಗಳ ಶೇಕಡಾವಾರು ಪ್ರಮಾಣವಾಗಿರಬಹುದು. ಇಲ್ಲವೇ, ವೈಯಕ್ತಿಕ ಮಟ್ಟದಲ್ಲಿ ಮತ್ತು ವ್ಯವಸ್ಥಿತ ಮಟ್ಟದಲ್ಲಿ ಬ್ಯಾಂಕ್‌ಗಳ ದ್ರವ್ಯತೆ ವ್ಯಾಪ್ತಿಯ ಅನುಪಾತವಾಗಿರಲಿ, ಬ್ಯಾಂಕುಗಳ ಲಾಭದಾಯಕತೆ ಅಥವಾ ಯಾವುದೇ ಇರಲಿ. ಭಾರತೀಯ ಬ್ಯಾಂಕಿಂಗ್‌ ವ್ಯವಸ್ಥೆಯು ತುಂಬಾ ಆರೋಗ್ಯಕರವಾಗಿ ಮುಂದುವರಿಯುತ್ತದೆ’ ಎಂದಿದ್ದಾರೆ.

‘ನಾವು ಬ್ಯಾಂಕೇತರ ಹಣಕಾಸು ಸಂಸ್ಥೆಗಳೂ ಸೇರಿದಂತೆ ಸಂಪೂರ್ಣ ಬ್ಯಾಂಕಿಂಗ್ ವ್ಯವಸ್ಥೆ ಮೇಲಿನ ನಿಯಂತ್ರಣ ಮತ್ತು ಮೇಲ್ವಿಚಾರಣೆಯನ್ನು ಗಮನಾರ್ಹವಾಗಿ ಸುಧಾರಿಸಿದ್ದೇವೆ ಮತ್ತು ಬಿಗಿಗೊಳಿಸಿದ್ದೇವೆ’ ಎಂದು ತಿಳಿಸಿದ್ದಾರೆ.

ಬಿಕ್ಕಟ್ಟು ಸೃಷ್ಟಿಯಾಗುವ ವರೆಗೆ ಕಾಯುವ ಬದಲು, ದೋಷಗಳನ್ನು ಮೊದಲೇ ಗುರುತಿಸುವುದು ಮೇಲ್ವಿಚಾರಣೆಯ ಆದ್ಯತೆಯಾಗಿರುತ್ತದೆ ಎಂದೂ ದಾಸ್‌ ಹೇಳಿದ್ದಾರೆ.

lokesh

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

4 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

4 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

4 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

4 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

4 hours ago