BREAKING NEWS

ಚಂದ್ರನ ಕೊನೆಯ ಕಕ್ಷೆಗೆ ಪ್ರವೇಶಿಸಿದ ಭಾರತದ ಚಂದ್ರಯಾನ ನೌಕೆ

ಬೆಂಗಳೂರು : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ.

ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.

ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ತಿಳಿಸಿದ್ದು ಚಂದ್ರನ ಕಕ್ಷೆಗೆ ಅಂತಿಮ ಪರಿಚಲನೆ ಪೂರ್ಣಗೊಂಡಿದೆ ಎಂದು ಹೇಳಿದೆ.

ಈಗ ಲ್ಯಾಂಡರ್ ಮಾಡ್ಯೂಲ್ ನಿಂದ ಉಡ್ಡಯನ ವಾಹಕ ಪ್ರತ್ಯೇಕಿಸುವ ಸಮಯ. ಇದಕ್ಕೆ ಆಗಸ್ಟ್ 17ರಂದು ಮುಹೂರ್ತ ನಿಗದಿಯಾಗಿದೆ ಎಂದು ತಿಳಿಸಿದೆ.

ಜು.14ರಂದು ಉಡಾವಣೆಯಾದ ಚಂದ್ರಯಾನ-3 ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಆದಾದ ನಂತರ ಸತತ 3 ಕಕ್ಷೆ ಪರಿಚಲನೆ ಮೂಲಕ ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈ ಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago