ಬೆಂಗಳೂರು : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ.
ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.
ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ತಿಳಿಸಿದ್ದು ಚಂದ್ರನ ಕಕ್ಷೆಗೆ ಅಂತಿಮ ಪರಿಚಲನೆ ಪೂರ್ಣಗೊಂಡಿದೆ ಎಂದು ಹೇಳಿದೆ.
ಈಗ ಲ್ಯಾಂಡರ್ ಮಾಡ್ಯೂಲ್ ನಿಂದ ಉಡ್ಡಯನ ವಾಹಕ ಪ್ರತ್ಯೇಕಿಸುವ ಸಮಯ. ಇದಕ್ಕೆ ಆಗಸ್ಟ್ 17ರಂದು ಮುಹೂರ್ತ ನಿಗದಿಯಾಗಿದೆ ಎಂದು ತಿಳಿಸಿದೆ.
ಜು.14ರಂದು ಉಡಾವಣೆಯಾದ ಚಂದ್ರಯಾನ-3 ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಆದಾದ ನಂತರ ಸತತ 3 ಕಕ್ಷೆ ಪರಿಚಲನೆ ಮೂಲಕ ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈ ಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…