ಬೆಂಗಳೂರು : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ.
ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.
ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ತಿಳಿಸಿದ್ದು ಚಂದ್ರನ ಕಕ್ಷೆಗೆ ಅಂತಿಮ ಪರಿಚಲನೆ ಪೂರ್ಣಗೊಂಡಿದೆ ಎಂದು ಹೇಳಿದೆ.
ಈಗ ಲ್ಯಾಂಡರ್ ಮಾಡ್ಯೂಲ್ ನಿಂದ ಉಡ್ಡಯನ ವಾಹಕ ಪ್ರತ್ಯೇಕಿಸುವ ಸಮಯ. ಇದಕ್ಕೆ ಆಗಸ್ಟ್ 17ರಂದು ಮುಹೂರ್ತ ನಿಗದಿಯಾಗಿದೆ ಎಂದು ತಿಳಿಸಿದೆ.
ಜು.14ರಂದು ಉಡಾವಣೆಯಾದ ಚಂದ್ರಯಾನ-3 ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಆದಾದ ನಂತರ ಸತತ 3 ಕಕ್ಷೆ ಪರಿಚಲನೆ ಮೂಲಕ ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈ ಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…