BREAKING NEWS

2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಪ್ರಯತ್ನ: ಪ್ರಧಾನಿ ಮೋದಿ

ಮುಂಬೈ : ಏಷ್ಯನ್ ಗೇಮ್ಸ್ ನಲ್ಲಿ ಇದೇ ಮೊದಲ ಬಾರಿಗೆ ಪದಕ ಗಳಿಕೆಯಲ್ಲಿ ಭಾರತ ಶತಕ ಸಾಧನೆ ಮಾಡಿರುವ ಬೆನ್ನಲ್ಲೇ, ವಿಶ್ವದ ಅತಿದೊಡ್ಡ ಕ್ರೀಡಾ ಉತ್ಸವವಾದ ಒಲಿಂಪಿಕ್ಸ್ ಕೂಟವನ್ನು ಭಾರತದಲ್ಲಿ ಆಯೋಜಿಸುವ ಪ್ರಯತ್ನವನ್ನು ಭಾರತ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. 2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಬಿಡ್ ಮಾಡಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಮುಂದಾಗುವ ನಿರ್ಧಾರ ಅಚಲ. ಒಲಿಂಪಿಕ್ಸ್ ಕ್ರೀಡೆಗಳ ಆತಿಥ್ಯ ವಹಿಸಲು ಭಾರತ ಉತ್ಸುಕವಾಗಿದೆ. ಇದು 140 ಕೋಟಿ ಭಾರತೀಯರ ಹಲವು ವರ್ಷಗಳ ಕನಸು ಮತ್ತು ಬಯಕೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ 141ನೇ ಅಧಿವೇಶನದಲ್ಲಿ ಮಾತನಾಡಿದ ಅವರು ಹೇಳಿದರು.

“ಈ ಕನಸನ್ನು ನಿಮ್ಮ ಸಹಭಾಗಿತ್ವ ಮತ್ತು ಸಹಕಾರದಲ್ಲಿ ಇದನ್ನು ನನಸುಗೊಳಿಸಲು ನಾವು ಬಯಸುತ್ತೇವೆ. ಈ ನಿಟ್ಟಿನಲ್ಲಿ ಭಾರತ ಐಓಸಿಯ ಸಹಕಾರ ದೊರಕುತ್ತದೆ ಎಂಬ ವಿಶ್ವಾಸವಿದೆ” ಎಂದರು. ಭಾರತದಲ್ಲಿ ಕ್ರೀಡೆಯ ಸಂಪ್ರದಾಯ ಸಿಂಧೂ ಕಣಿವೆ ನಾಗರೀಕತೆಯಷ್ಟು ಹಳೆಯದು ಎಂದ ಅವರು, ಭಾರತೀಯರು ಕ್ರೀಡಾಪ್ರೇಮಿಗಳು ಮಾತ್ರವಲ್ಲ, ಅದು ಅವರ ಜೀವ. ದೇಶ ಕೂಡಾ 2029ರ ಯುವ ಒಲಿಂಪಿಕ್ಸ್ ನ ಆತಿಥ್ಯಕ್ಕೂ ಉತ್ಸುಕವಾಗಿದೆ” ಎಂದು ಸ್ಪಷ್ಟಪಡಿಸಿದರು.

ಭಾರತಕ್ಕೆ ಜಾಗತಿಕ ಕೂಟವನ್ನು ಆಯೋಜಿಸಲು ಅಗತ್ಯವಾದ ಮೂಲಸೌಕರ್ಯ, ಲಾಜಿಸ್ಟಿಕ್ಸ್ ಮತ್ತು ಅಗತ್ಯ ಸಂಘಟನಾ ಸಾಮರ್ಥ್ಯ ಇದೆ. ಜಿ20 ಶೃಂಗ ಮತ್ತು ಅಧ್ಯಕ್ಷತೆಯನ್ನು ಉದಾಹರಿಸಿದ ಅವರು 60ಕ್ಕೂ ಹೆಚ್ಚು ನಗರಗಳಲ್ಲಿ ಈ ಸಂಬಂಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದು ಪ್ರತಿ ವಲಯದಲ್ಲೂ ಭಾರತದ ಸಂಘಟನಾ ಸಾಮರ್ಥ್ಯಕ್ಕೆ ಉದಾಹರಣೆ ಎಂದು ಬಣ್ಣಿಸಿದರು.

https://x.com/the_newsmen/status/1713260869566734606?s=20

andolanait

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

5 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

6 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

6 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

6 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

7 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

8 hours ago