BREAKING NEWS

2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಪ್ರಯತ್ನ: ಪ್ರಧಾನಿ ಮೋದಿ

ಮುಂಬೈ : ಏಷ್ಯನ್ ಗೇಮ್ಸ್ ನಲ್ಲಿ ಇದೇ ಮೊದಲ ಬಾರಿಗೆ ಪದಕ ಗಳಿಕೆಯಲ್ಲಿ ಭಾರತ ಶತಕ ಸಾಧನೆ ಮಾಡಿರುವ ಬೆನ್ನಲ್ಲೇ, ವಿಶ್ವದ ಅತಿದೊಡ್ಡ ಕ್ರೀಡಾ ಉತ್ಸವವಾದ ಒಲಿಂಪಿಕ್ಸ್ ಕೂಟವನ್ನು ಭಾರತದಲ್ಲಿ ಆಯೋಜಿಸುವ ಪ್ರಯತ್ನವನ್ನು ಭಾರತ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. 2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಬಿಡ್ ಮಾಡಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಮುಂದಾಗುವ ನಿರ್ಧಾರ ಅಚಲ. ಒಲಿಂಪಿಕ್ಸ್ ಕ್ರೀಡೆಗಳ ಆತಿಥ್ಯ ವಹಿಸಲು ಭಾರತ ಉತ್ಸುಕವಾಗಿದೆ. ಇದು 140 ಕೋಟಿ ಭಾರತೀಯರ ಹಲವು ವರ್ಷಗಳ ಕನಸು ಮತ್ತು ಬಯಕೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ 141ನೇ ಅಧಿವೇಶನದಲ್ಲಿ ಮಾತನಾಡಿದ ಅವರು ಹೇಳಿದರು.

“ಈ ಕನಸನ್ನು ನಿಮ್ಮ ಸಹಭಾಗಿತ್ವ ಮತ್ತು ಸಹಕಾರದಲ್ಲಿ ಇದನ್ನು ನನಸುಗೊಳಿಸಲು ನಾವು ಬಯಸುತ್ತೇವೆ. ಈ ನಿಟ್ಟಿನಲ್ಲಿ ಭಾರತ ಐಓಸಿಯ ಸಹಕಾರ ದೊರಕುತ್ತದೆ ಎಂಬ ವಿಶ್ವಾಸವಿದೆ” ಎಂದರು. ಭಾರತದಲ್ಲಿ ಕ್ರೀಡೆಯ ಸಂಪ್ರದಾಯ ಸಿಂಧೂ ಕಣಿವೆ ನಾಗರೀಕತೆಯಷ್ಟು ಹಳೆಯದು ಎಂದ ಅವರು, ಭಾರತೀಯರು ಕ್ರೀಡಾಪ್ರೇಮಿಗಳು ಮಾತ್ರವಲ್ಲ, ಅದು ಅವರ ಜೀವ. ದೇಶ ಕೂಡಾ 2029ರ ಯುವ ಒಲಿಂಪಿಕ್ಸ್ ನ ಆತಿಥ್ಯಕ್ಕೂ ಉತ್ಸುಕವಾಗಿದೆ” ಎಂದು ಸ್ಪಷ್ಟಪಡಿಸಿದರು.

ಭಾರತಕ್ಕೆ ಜಾಗತಿಕ ಕೂಟವನ್ನು ಆಯೋಜಿಸಲು ಅಗತ್ಯವಾದ ಮೂಲಸೌಕರ್ಯ, ಲಾಜಿಸ್ಟಿಕ್ಸ್ ಮತ್ತು ಅಗತ್ಯ ಸಂಘಟನಾ ಸಾಮರ್ಥ್ಯ ಇದೆ. ಜಿ20 ಶೃಂಗ ಮತ್ತು ಅಧ್ಯಕ್ಷತೆಯನ್ನು ಉದಾಹರಿಸಿದ ಅವರು 60ಕ್ಕೂ ಹೆಚ್ಚು ನಗರಗಳಲ್ಲಿ ಈ ಸಂಬಂಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದು ಪ್ರತಿ ವಲಯದಲ್ಲೂ ಭಾರತದ ಸಂಘಟನಾ ಸಾಮರ್ಥ್ಯಕ್ಕೆ ಉದಾಹರಣೆ ಎಂದು ಬಣ್ಣಿಸಿದರು.

https://x.com/the_newsmen/status/1713260869566734606?s=20

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

7 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

7 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

7 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

8 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

17 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

17 hours ago