BREAKING NEWS

2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಪ್ರಯತ್ನ: ಪ್ರಧಾನಿ ಮೋದಿ

ಮುಂಬೈ : ಏಷ್ಯನ್ ಗೇಮ್ಸ್ ನಲ್ಲಿ ಇದೇ ಮೊದಲ ಬಾರಿಗೆ ಪದಕ ಗಳಿಕೆಯಲ್ಲಿ ಭಾರತ ಶತಕ ಸಾಧನೆ ಮಾಡಿರುವ ಬೆನ್ನಲ್ಲೇ, ವಿಶ್ವದ ಅತಿದೊಡ್ಡ ಕ್ರೀಡಾ ಉತ್ಸವವಾದ ಒಲಿಂಪಿಕ್ಸ್ ಕೂಟವನ್ನು ಭಾರತದಲ್ಲಿ ಆಯೋಜಿಸುವ ಪ್ರಯತ್ನವನ್ನು ಭಾರತ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. 2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಬಿಡ್ ಮಾಡಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಮುಂದಾಗುವ ನಿರ್ಧಾರ ಅಚಲ. ಒಲಿಂಪಿಕ್ಸ್ ಕ್ರೀಡೆಗಳ ಆತಿಥ್ಯ ವಹಿಸಲು ಭಾರತ ಉತ್ಸುಕವಾಗಿದೆ. ಇದು 140 ಕೋಟಿ ಭಾರತೀಯರ ಹಲವು ವರ್ಷಗಳ ಕನಸು ಮತ್ತು ಬಯಕೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ 141ನೇ ಅಧಿವೇಶನದಲ್ಲಿ ಮಾತನಾಡಿದ ಅವರು ಹೇಳಿದರು.

“ಈ ಕನಸನ್ನು ನಿಮ್ಮ ಸಹಭಾಗಿತ್ವ ಮತ್ತು ಸಹಕಾರದಲ್ಲಿ ಇದನ್ನು ನನಸುಗೊಳಿಸಲು ನಾವು ಬಯಸುತ್ತೇವೆ. ಈ ನಿಟ್ಟಿನಲ್ಲಿ ಭಾರತ ಐಓಸಿಯ ಸಹಕಾರ ದೊರಕುತ್ತದೆ ಎಂಬ ವಿಶ್ವಾಸವಿದೆ” ಎಂದರು. ಭಾರತದಲ್ಲಿ ಕ್ರೀಡೆಯ ಸಂಪ್ರದಾಯ ಸಿಂಧೂ ಕಣಿವೆ ನಾಗರೀಕತೆಯಷ್ಟು ಹಳೆಯದು ಎಂದ ಅವರು, ಭಾರತೀಯರು ಕ್ರೀಡಾಪ್ರೇಮಿಗಳು ಮಾತ್ರವಲ್ಲ, ಅದು ಅವರ ಜೀವ. ದೇಶ ಕೂಡಾ 2029ರ ಯುವ ಒಲಿಂಪಿಕ್ಸ್ ನ ಆತಿಥ್ಯಕ್ಕೂ ಉತ್ಸುಕವಾಗಿದೆ” ಎಂದು ಸ್ಪಷ್ಟಪಡಿಸಿದರು.

ಭಾರತಕ್ಕೆ ಜಾಗತಿಕ ಕೂಟವನ್ನು ಆಯೋಜಿಸಲು ಅಗತ್ಯವಾದ ಮೂಲಸೌಕರ್ಯ, ಲಾಜಿಸ್ಟಿಕ್ಸ್ ಮತ್ತು ಅಗತ್ಯ ಸಂಘಟನಾ ಸಾಮರ್ಥ್ಯ ಇದೆ. ಜಿ20 ಶೃಂಗ ಮತ್ತು ಅಧ್ಯಕ್ಷತೆಯನ್ನು ಉದಾಹರಿಸಿದ ಅವರು 60ಕ್ಕೂ ಹೆಚ್ಚು ನಗರಗಳಲ್ಲಿ ಈ ಸಂಬಂಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದು ಪ್ರತಿ ವಲಯದಲ್ಲೂ ಭಾರತದ ಸಂಘಟನಾ ಸಾಮರ್ಥ್ಯಕ್ಕೆ ಉದಾಹರಣೆ ಎಂದು ಬಣ್ಣಿಸಿದರು.

https://x.com/the_newsmen/status/1713260869566734606?s=20

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

8 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

8 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

8 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

8 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

8 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

8 hours ago