BREAKING NEWS

ಭಾರತದ ಮೋಸ್ಟ್ ವಾಂಟೆಡ್ ಟೆರರಿಸ್ಟ್ ಶಾಹಿದ್ ಲತೀಫ್ ಪಾಕಿಸ್ತಾನದಲ್ಲಿ ಹತ್ಯೆ

ಇಸ್ಲಾಮಾಬಾದ್‌ : ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ನನ್ನು (41) ಬುಧವಾರ ಪಾಕಿಸ್ತಾನದ ಸಿಯಾಲ್ ಕೋಟ್‌ನಲ್ಲಿ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.

ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸದಸ್ಯನಾಗಿದ್ದು, 2016ರ ಜನವರಿ 2 ರಂದು ಪ್ರಾರಂಭವಾದ ಪಠಾಣ್ ಕೋಟ್ ದಾಳಿಯ ಪ್ರಮುಖ ಸಂಚುಕೋರನಾಗಿದ್ದ. ಆತ ಸಿಯಾಲ್‌ಕೋಟ್‌ನಲ್ಲಿ ದಾಳಿಯನ್ನು ನಡೆಸಲು ಸಂಘಟಿಸಿ, ಅದನ್ನು ಕಾರ್ಯಗತಗೊಳಿಸಲು ನಾಲ್ವರು ಭಯೋತ್ಪಾದಕರನ್ನು ಪಠಾಣ್ ಕೋಟ್‌ಗೆ ಕಳುಹಿಸಿದ್ದ.

ಕಾನೂನುಬಾಹಿರ ಚಟುವಟಿಕೆಗಳ ಕಾಯಿದೆಯ ಅಡಿಯಲ್ಲಿ ಭಯೋತ್ಪಾದನೆಯ ಆರೋಪದ ಮೇಲೆ ನವೆಂಬರ್ 1994 ರಲ್ಲಿ ಆತನನ್ನು ಭಾರತದಲ್ಲಿ ಬಂಧಿಸಲಾಗಿತ್ತು. ಆತನನ್ನು ವಿಚಾರಣೆಗೆ ಒಳಪಡಿಸಿ, ಜೈಲಿಗೆ ಹಾಕಲಾಗಿತ್ತು. ಭಾರತದಲ್ಲಿ ಶಿಕ್ಷೆ ಅನುಭವಿಸಿದ ನಂತರ ಆತನನ್ನು 2010 ರಲ್ಲಿ ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ಗಡೀಪಾರು ಮಾಡಲಾಯಿತು.

1999ರಲ್ಲಿ ಇಂಡಿಯನ್ ಏರ್‌ಲೈನ್ಸ್ ವಿಮಾನ ಅಪಹರಣ ಪ್ರಕರಣದಲ್ಲೂ ಲತೀಫ್ ಆರೋಪಿಯಾಗಿದ್ದ. 2010 ರಲ್ಲಿ ಬಿಡುಗಡೆಯಾದ ನಂತರ ಲತೀಫ್ ಪಾಕಿಸ್ತಾನದ ಜಿಹಾದಿ ಸಂಘಟನೆಗೆ ಹಿಂತಿರುಗಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಹೇಳಿದೆ. ಭಾರತ ಸರ್ಕಾರ ಆತನನ್ನು ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿ ಸೇರಿಸಿದೆ.

lokesh

Recent Posts

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

1 hour ago

ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ತಂಬಾಕು ಪ್ರಚಾರ : ತೆರವಿಗೆ ಫೆ.15 ಗಡವು

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…

2 hours ago

ಕೇಂದ್ರ ಸೂಚನೆ ಮೇರೆಗೆ ದರ ಏರಿಕೆ ಕೈಬಿಟ್ಟ ನಮ್ಮ ಮೆಟ್ರೋ

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ…

2 hours ago

ಮೈಸೂರು | ಕೇಂದ್ರ ಕಾರಾಗೃಹಕ್ಕೆ ಭೇಟಿ, ಪರಿಶೀಲನೆ ನಡೆಸಿದ ಅಲೋಕ್‌ಕುಮಾರ್‌

ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…

2 hours ago

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…

2 hours ago

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…

2 hours ago