BREAKING NEWS

ಭಾರತದ ಮೋಸ್ಟ್ ವಾಂಟೆಡ್ ಟೆರರಿಸ್ಟ್ ಶಾಹಿದ್ ಲತೀಫ್ ಪಾಕಿಸ್ತಾನದಲ್ಲಿ ಹತ್ಯೆ

ಇಸ್ಲಾಮಾಬಾದ್‌ : ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ನನ್ನು (41) ಬುಧವಾರ ಪಾಕಿಸ್ತಾನದ ಸಿಯಾಲ್ ಕೋಟ್‌ನಲ್ಲಿ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.

ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸದಸ್ಯನಾಗಿದ್ದು, 2016ರ ಜನವರಿ 2 ರಂದು ಪ್ರಾರಂಭವಾದ ಪಠಾಣ್ ಕೋಟ್ ದಾಳಿಯ ಪ್ರಮುಖ ಸಂಚುಕೋರನಾಗಿದ್ದ. ಆತ ಸಿಯಾಲ್‌ಕೋಟ್‌ನಲ್ಲಿ ದಾಳಿಯನ್ನು ನಡೆಸಲು ಸಂಘಟಿಸಿ, ಅದನ್ನು ಕಾರ್ಯಗತಗೊಳಿಸಲು ನಾಲ್ವರು ಭಯೋತ್ಪಾದಕರನ್ನು ಪಠಾಣ್ ಕೋಟ್‌ಗೆ ಕಳುಹಿಸಿದ್ದ.

ಕಾನೂನುಬಾಹಿರ ಚಟುವಟಿಕೆಗಳ ಕಾಯಿದೆಯ ಅಡಿಯಲ್ಲಿ ಭಯೋತ್ಪಾದನೆಯ ಆರೋಪದ ಮೇಲೆ ನವೆಂಬರ್ 1994 ರಲ್ಲಿ ಆತನನ್ನು ಭಾರತದಲ್ಲಿ ಬಂಧಿಸಲಾಗಿತ್ತು. ಆತನನ್ನು ವಿಚಾರಣೆಗೆ ಒಳಪಡಿಸಿ, ಜೈಲಿಗೆ ಹಾಕಲಾಗಿತ್ತು. ಭಾರತದಲ್ಲಿ ಶಿಕ್ಷೆ ಅನುಭವಿಸಿದ ನಂತರ ಆತನನ್ನು 2010 ರಲ್ಲಿ ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ಗಡೀಪಾರು ಮಾಡಲಾಯಿತು.

1999ರಲ್ಲಿ ಇಂಡಿಯನ್ ಏರ್‌ಲೈನ್ಸ್ ವಿಮಾನ ಅಪಹರಣ ಪ್ರಕರಣದಲ್ಲೂ ಲತೀಫ್ ಆರೋಪಿಯಾಗಿದ್ದ. 2010 ರಲ್ಲಿ ಬಿಡುಗಡೆಯಾದ ನಂತರ ಲತೀಫ್ ಪಾಕಿಸ್ತಾನದ ಜಿಹಾದಿ ಸಂಘಟನೆಗೆ ಹಿಂತಿರುಗಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಹೇಳಿದೆ. ಭಾರತ ಸರ್ಕಾರ ಆತನನ್ನು ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿ ಸೇರಿಸಿದೆ.

lokesh

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

2 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

4 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

5 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

8 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago