BREAKING NEWS

ದೇಶದ ಸರ್ಕಾರಿ ವೈಬ್‌ಸೈಟ್‌ಗಳಿಗೆ ಇಂಡೋನೇಷ್ಯಾ ಹ್ಯಾಕರ್‌ಗಳ ಕನ್ನ: ವರದಿ

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಸರ್ಕಾರಿ ಪೋರ್ಟಲ್‌ಗಳನ್ನು ಗುರಿಯಾಗಿಸಿ ಇಂಡೋನೇಷ್ಯಾದ ಹ್ಯಾಕರ್‌ಗಳ ಗುಂಪು ದಾಳಿ ನಡೆಸಲು ಸಂಚು ರೂಪುಸುತ್ತಿದೆ ಎಂಬ ದೂರಿನ ಹಿನ್ನೆಲೆ ಸೈಬರ್‌ ಭದ್ರತಾ ಸಂಶೋಧಕರು ಈ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಸೈಬರ್ ಸೆಕ್ಯುರಿಟಿ ಸೂಚನೆಯ ಪ್ರಕಾರ, ಇಂಡೋನೇಷ್ಯಾದ ‘ಹ್ಯಾಕ್ಟಿವಿಸ್ಟಾ‘ ಎಂಬ ಸಂಸ್ಥೆ ರಾಜ್ಯ ಮತ್ತು ಕೇಂದ್ರ ಸರ್ಕಾರಿ ವೆಬ್‌ಸೈಟ್‌ಗಳನ್ನು ಗುರಿಯಾಗಿಸಿ ದಾಳಿ ಮಾಡಬಹುದು ಎಂದು ಹೇಳಿದೆ‘ ಎಂದಿದೆ.

ಈ ಹ್ಯಾಕರ್‌ಗಳ ಗುಂಪು 1,200ರಷ್ಟು ಸರ್ಕಾರದ ವೆಬ್‌ಸೈಟ್‌ಗಳ ವಿರುದ್ಧ ಉದ್ದೇಶಪೂರ್ವಕವಾಗಿ ದಾಳಿ ನಡೆಸುವ ಇರಾದೆ ಹೊಂದಿದೆ ಎಂದೂ ವರದಿಯಲ್ಲಿದೆ.

‘ನಾವು ಡಿಜಿಟಲ್ ರೂಪಾಂತರದ ಹಾದಿಯಲ್ಲಿ ವೇಗವಾಗಿ ಮುನ್ನಡೆಯುತ್ತಿರುವ ಹೊತ್ತಿನಲ್ಲಿ, ಸೈಬರ್ ಸುರಕ್ಷತೆಗೆ ಹೆಚ್ಚಿನ ಗಮನ ನೀಡುತ್ತಿಲ್ಲ. DoS ಮತ್ತು DDoS ದಾಳಿಗಳು ಅತಿ ದೊಡ್ಡ ದಾಳಿಯ ಪ್ರಕಾರಗಳಾಗಿವೆ. ಏಕೆಂದರೆ, ಈ ಪ್ರೋಗ್ರಾಮ್ ಅನ್ನು ಸುಲಭವಾಗಿ ಅಳವಡಿಸಿ, ಅವುಗಳು ಹರಡುವ ಪ್ರಮಾಣದ ಜತೆಗೆ ವೇಗವನ್ನು ಹೆಚ್ಚಿಸುವಂತೆ ರೂಪಿಸಬಹುದು‘ ಎಂದು ಇಂಡಸ್ ಸೈಬರ್ ಸೆಕ್ಯುರಿಟಿ ಸಂಸ್ಥೆಯ ಸಿಇಒ ಆಶಿಶ್ ಟಂಡನ್ ತಿಳಿಸಿದ್ದಾರೆ.

‘ಇಂದು ಹ್ಯಾಕರ್‌ಗಳು ಸುಧಾರಿತ ಕ್ಲೌಡ್ ಆಧಾರಿತ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ದಾಳಿ ಸಂಘಟಿಸುತ್ತಾರೆ. ಸರ್ಕಾರವು ತನ್ನ ಡಿಜಿಟಲ್ ಮೂಲಸೌಕರ್ಯವನ್ನು ಕ್ಲೌಡ್‌ಗೆ ಬದಲಾಯಿಸುವ ಸಮಯ ಬಂದಿದೆ‘ ಎಂದು ಅವರು ತಿಳಿಸಿದರು.

2022ರಲ್ಲಿ ದೇಶದ 19 ಸರ್ಕಾರಿ ವೆಬ್‌ಸೈಟ್‌ಗಳು ಹ್ಯಾಕಿಂಗ್ ದಾಳಿಗೆ ಒಳಪಟ್ಟಿದ್ದವು.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

6 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

7 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

8 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

8 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

8 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

9 hours ago