BREAKING NEWS

ದೇಶದ ಸರ್ಕಾರಿ ವೈಬ್‌ಸೈಟ್‌ಗಳಿಗೆ ಇಂಡೋನೇಷ್ಯಾ ಹ್ಯಾಕರ್‌ಗಳ ಕನ್ನ: ವರದಿ

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಸರ್ಕಾರಿ ಪೋರ್ಟಲ್‌ಗಳನ್ನು ಗುರಿಯಾಗಿಸಿ ಇಂಡೋನೇಷ್ಯಾದ ಹ್ಯಾಕರ್‌ಗಳ ಗುಂಪು ದಾಳಿ ನಡೆಸಲು ಸಂಚು ರೂಪುಸುತ್ತಿದೆ ಎಂಬ ದೂರಿನ ಹಿನ್ನೆಲೆ ಸೈಬರ್‌ ಭದ್ರತಾ ಸಂಶೋಧಕರು ಈ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಸೈಬರ್ ಸೆಕ್ಯುರಿಟಿ ಸೂಚನೆಯ ಪ್ರಕಾರ, ಇಂಡೋನೇಷ್ಯಾದ ‘ಹ್ಯಾಕ್ಟಿವಿಸ್ಟಾ‘ ಎಂಬ ಸಂಸ್ಥೆ ರಾಜ್ಯ ಮತ್ತು ಕೇಂದ್ರ ಸರ್ಕಾರಿ ವೆಬ್‌ಸೈಟ್‌ಗಳನ್ನು ಗುರಿಯಾಗಿಸಿ ದಾಳಿ ಮಾಡಬಹುದು ಎಂದು ಹೇಳಿದೆ‘ ಎಂದಿದೆ.

ಈ ಹ್ಯಾಕರ್‌ಗಳ ಗುಂಪು 1,200ರಷ್ಟು ಸರ್ಕಾರದ ವೆಬ್‌ಸೈಟ್‌ಗಳ ವಿರುದ್ಧ ಉದ್ದೇಶಪೂರ್ವಕವಾಗಿ ದಾಳಿ ನಡೆಸುವ ಇರಾದೆ ಹೊಂದಿದೆ ಎಂದೂ ವರದಿಯಲ್ಲಿದೆ.

‘ನಾವು ಡಿಜಿಟಲ್ ರೂಪಾಂತರದ ಹಾದಿಯಲ್ಲಿ ವೇಗವಾಗಿ ಮುನ್ನಡೆಯುತ್ತಿರುವ ಹೊತ್ತಿನಲ್ಲಿ, ಸೈಬರ್ ಸುರಕ್ಷತೆಗೆ ಹೆಚ್ಚಿನ ಗಮನ ನೀಡುತ್ತಿಲ್ಲ. DoS ಮತ್ತು DDoS ದಾಳಿಗಳು ಅತಿ ದೊಡ್ಡ ದಾಳಿಯ ಪ್ರಕಾರಗಳಾಗಿವೆ. ಏಕೆಂದರೆ, ಈ ಪ್ರೋಗ್ರಾಮ್ ಅನ್ನು ಸುಲಭವಾಗಿ ಅಳವಡಿಸಿ, ಅವುಗಳು ಹರಡುವ ಪ್ರಮಾಣದ ಜತೆಗೆ ವೇಗವನ್ನು ಹೆಚ್ಚಿಸುವಂತೆ ರೂಪಿಸಬಹುದು‘ ಎಂದು ಇಂಡಸ್ ಸೈಬರ್ ಸೆಕ್ಯುರಿಟಿ ಸಂಸ್ಥೆಯ ಸಿಇಒ ಆಶಿಶ್ ಟಂಡನ್ ತಿಳಿಸಿದ್ದಾರೆ.

‘ಇಂದು ಹ್ಯಾಕರ್‌ಗಳು ಸುಧಾರಿತ ಕ್ಲೌಡ್ ಆಧಾರಿತ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ದಾಳಿ ಸಂಘಟಿಸುತ್ತಾರೆ. ಸರ್ಕಾರವು ತನ್ನ ಡಿಜಿಟಲ್ ಮೂಲಸೌಕರ್ಯವನ್ನು ಕ್ಲೌಡ್‌ಗೆ ಬದಲಾಯಿಸುವ ಸಮಯ ಬಂದಿದೆ‘ ಎಂದು ಅವರು ತಿಳಿಸಿದರು.

2022ರಲ್ಲಿ ದೇಶದ 19 ಸರ್ಕಾರಿ ವೆಬ್‌ಸೈಟ್‌ಗಳು ಹ್ಯಾಕಿಂಗ್ ದಾಳಿಗೆ ಒಳಪಟ್ಟಿದ್ದವು.

andolanait

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

6 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

6 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

7 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

8 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

8 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

8 hours ago