BREAKING NEWS

ದೇಶದ ಸರ್ಕಾರಿ ವೈಬ್‌ಸೈಟ್‌ಗಳಿಗೆ ಇಂಡೋನೇಷ್ಯಾ ಹ್ಯಾಕರ್‌ಗಳ ಕನ್ನ: ವರದಿ

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಸರ್ಕಾರಿ ಪೋರ್ಟಲ್‌ಗಳನ್ನು ಗುರಿಯಾಗಿಸಿ ಇಂಡೋನೇಷ್ಯಾದ ಹ್ಯಾಕರ್‌ಗಳ ಗುಂಪು ದಾಳಿ ನಡೆಸಲು ಸಂಚು ರೂಪುಸುತ್ತಿದೆ ಎಂಬ ದೂರಿನ ಹಿನ್ನೆಲೆ ಸೈಬರ್‌ ಭದ್ರತಾ ಸಂಶೋಧಕರು ಈ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಸೈಬರ್ ಸೆಕ್ಯುರಿಟಿ ಸೂಚನೆಯ ಪ್ರಕಾರ, ಇಂಡೋನೇಷ್ಯಾದ ‘ಹ್ಯಾಕ್ಟಿವಿಸ್ಟಾ‘ ಎಂಬ ಸಂಸ್ಥೆ ರಾಜ್ಯ ಮತ್ತು ಕೇಂದ್ರ ಸರ್ಕಾರಿ ವೆಬ್‌ಸೈಟ್‌ಗಳನ್ನು ಗುರಿಯಾಗಿಸಿ ದಾಳಿ ಮಾಡಬಹುದು ಎಂದು ಹೇಳಿದೆ‘ ಎಂದಿದೆ.

ಈ ಹ್ಯಾಕರ್‌ಗಳ ಗುಂಪು 1,200ರಷ್ಟು ಸರ್ಕಾರದ ವೆಬ್‌ಸೈಟ್‌ಗಳ ವಿರುದ್ಧ ಉದ್ದೇಶಪೂರ್ವಕವಾಗಿ ದಾಳಿ ನಡೆಸುವ ಇರಾದೆ ಹೊಂದಿದೆ ಎಂದೂ ವರದಿಯಲ್ಲಿದೆ.

‘ನಾವು ಡಿಜಿಟಲ್ ರೂಪಾಂತರದ ಹಾದಿಯಲ್ಲಿ ವೇಗವಾಗಿ ಮುನ್ನಡೆಯುತ್ತಿರುವ ಹೊತ್ತಿನಲ್ಲಿ, ಸೈಬರ್ ಸುರಕ್ಷತೆಗೆ ಹೆಚ್ಚಿನ ಗಮನ ನೀಡುತ್ತಿಲ್ಲ. DoS ಮತ್ತು DDoS ದಾಳಿಗಳು ಅತಿ ದೊಡ್ಡ ದಾಳಿಯ ಪ್ರಕಾರಗಳಾಗಿವೆ. ಏಕೆಂದರೆ, ಈ ಪ್ರೋಗ್ರಾಮ್ ಅನ್ನು ಸುಲಭವಾಗಿ ಅಳವಡಿಸಿ, ಅವುಗಳು ಹರಡುವ ಪ್ರಮಾಣದ ಜತೆಗೆ ವೇಗವನ್ನು ಹೆಚ್ಚಿಸುವಂತೆ ರೂಪಿಸಬಹುದು‘ ಎಂದು ಇಂಡಸ್ ಸೈಬರ್ ಸೆಕ್ಯುರಿಟಿ ಸಂಸ್ಥೆಯ ಸಿಇಒ ಆಶಿಶ್ ಟಂಡನ್ ತಿಳಿಸಿದ್ದಾರೆ.

‘ಇಂದು ಹ್ಯಾಕರ್‌ಗಳು ಸುಧಾರಿತ ಕ್ಲೌಡ್ ಆಧಾರಿತ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ದಾಳಿ ಸಂಘಟಿಸುತ್ತಾರೆ. ಸರ್ಕಾರವು ತನ್ನ ಡಿಜಿಟಲ್ ಮೂಲಸೌಕರ್ಯವನ್ನು ಕ್ಲೌಡ್‌ಗೆ ಬದಲಾಯಿಸುವ ಸಮಯ ಬಂದಿದೆ‘ ಎಂದು ಅವರು ತಿಳಿಸಿದರು.

2022ರಲ್ಲಿ ದೇಶದ 19 ಸರ್ಕಾರಿ ವೆಬ್‌ಸೈಟ್‌ಗಳು ಹ್ಯಾಕಿಂಗ್ ದಾಳಿಗೆ ಒಳಪಟ್ಟಿದ್ದವು.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

1 hour ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

2 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

2 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

3 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

3 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

3 hours ago