BREAKING NEWS

ದೇಶದ ಸರ್ಕಾರಿ ವೈಬ್‌ಸೈಟ್‌ಗಳಿಗೆ ಇಂಡೋನೇಷ್ಯಾ ಹ್ಯಾಕರ್‌ಗಳ ಕನ್ನ: ವರದಿ

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಸರ್ಕಾರಿ ಪೋರ್ಟಲ್‌ಗಳನ್ನು ಗುರಿಯಾಗಿಸಿ ಇಂಡೋನೇಷ್ಯಾದ ಹ್ಯಾಕರ್‌ಗಳ ಗುಂಪು ದಾಳಿ ನಡೆಸಲು ಸಂಚು ರೂಪುಸುತ್ತಿದೆ ಎಂಬ ದೂರಿನ ಹಿನ್ನೆಲೆ ಸೈಬರ್‌ ಭದ್ರತಾ ಸಂಶೋಧಕರು ಈ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಸೈಬರ್ ಸೆಕ್ಯುರಿಟಿ ಸೂಚನೆಯ ಪ್ರಕಾರ, ಇಂಡೋನೇಷ್ಯಾದ ‘ಹ್ಯಾಕ್ಟಿವಿಸ್ಟಾ‘ ಎಂಬ ಸಂಸ್ಥೆ ರಾಜ್ಯ ಮತ್ತು ಕೇಂದ್ರ ಸರ್ಕಾರಿ ವೆಬ್‌ಸೈಟ್‌ಗಳನ್ನು ಗುರಿಯಾಗಿಸಿ ದಾಳಿ ಮಾಡಬಹುದು ಎಂದು ಹೇಳಿದೆ‘ ಎಂದಿದೆ.

ಈ ಹ್ಯಾಕರ್‌ಗಳ ಗುಂಪು 1,200ರಷ್ಟು ಸರ್ಕಾರದ ವೆಬ್‌ಸೈಟ್‌ಗಳ ವಿರುದ್ಧ ಉದ್ದೇಶಪೂರ್ವಕವಾಗಿ ದಾಳಿ ನಡೆಸುವ ಇರಾದೆ ಹೊಂದಿದೆ ಎಂದೂ ವರದಿಯಲ್ಲಿದೆ.

‘ನಾವು ಡಿಜಿಟಲ್ ರೂಪಾಂತರದ ಹಾದಿಯಲ್ಲಿ ವೇಗವಾಗಿ ಮುನ್ನಡೆಯುತ್ತಿರುವ ಹೊತ್ತಿನಲ್ಲಿ, ಸೈಬರ್ ಸುರಕ್ಷತೆಗೆ ಹೆಚ್ಚಿನ ಗಮನ ನೀಡುತ್ತಿಲ್ಲ. DoS ಮತ್ತು DDoS ದಾಳಿಗಳು ಅತಿ ದೊಡ್ಡ ದಾಳಿಯ ಪ್ರಕಾರಗಳಾಗಿವೆ. ಏಕೆಂದರೆ, ಈ ಪ್ರೋಗ್ರಾಮ್ ಅನ್ನು ಸುಲಭವಾಗಿ ಅಳವಡಿಸಿ, ಅವುಗಳು ಹರಡುವ ಪ್ರಮಾಣದ ಜತೆಗೆ ವೇಗವನ್ನು ಹೆಚ್ಚಿಸುವಂತೆ ರೂಪಿಸಬಹುದು‘ ಎಂದು ಇಂಡಸ್ ಸೈಬರ್ ಸೆಕ್ಯುರಿಟಿ ಸಂಸ್ಥೆಯ ಸಿಇಒ ಆಶಿಶ್ ಟಂಡನ್ ತಿಳಿಸಿದ್ದಾರೆ.

‘ಇಂದು ಹ್ಯಾಕರ್‌ಗಳು ಸುಧಾರಿತ ಕ್ಲೌಡ್ ಆಧಾರಿತ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ದಾಳಿ ಸಂಘಟಿಸುತ್ತಾರೆ. ಸರ್ಕಾರವು ತನ್ನ ಡಿಜಿಟಲ್ ಮೂಲಸೌಕರ್ಯವನ್ನು ಕ್ಲೌಡ್‌ಗೆ ಬದಲಾಯಿಸುವ ಸಮಯ ಬಂದಿದೆ‘ ಎಂದು ಅವರು ತಿಳಿಸಿದರು.

2022ರಲ್ಲಿ ದೇಶದ 19 ಸರ್ಕಾರಿ ವೆಬ್‌ಸೈಟ್‌ಗಳು ಹ್ಯಾಕಿಂಗ್ ದಾಳಿಗೆ ಒಳಪಟ್ಟಿದ್ದವು.

andolanait

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

2 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

3 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

4 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

4 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

4 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

5 hours ago