BREAKING NEWS

ದೇಶದ ಸರ್ಕಾರಿ ವೈಬ್‌ಸೈಟ್‌ಗಳಿಗೆ ಇಂಡೋನೇಷ್ಯಾ ಹ್ಯಾಕರ್‌ಗಳ ಕನ್ನ: ವರದಿ

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಸರ್ಕಾರಿ ಪೋರ್ಟಲ್‌ಗಳನ್ನು ಗುರಿಯಾಗಿಸಿ ಇಂಡೋನೇಷ್ಯಾದ ಹ್ಯಾಕರ್‌ಗಳ ಗುಂಪು ದಾಳಿ ನಡೆಸಲು ಸಂಚು ರೂಪುಸುತ್ತಿದೆ ಎಂಬ ದೂರಿನ ಹಿನ್ನೆಲೆ ಸೈಬರ್‌ ಭದ್ರತಾ ಸಂಶೋಧಕರು ಈ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಸೈಬರ್ ಸೆಕ್ಯುರಿಟಿ ಸೂಚನೆಯ ಪ್ರಕಾರ, ಇಂಡೋನೇಷ್ಯಾದ ‘ಹ್ಯಾಕ್ಟಿವಿಸ್ಟಾ‘ ಎಂಬ ಸಂಸ್ಥೆ ರಾಜ್ಯ ಮತ್ತು ಕೇಂದ್ರ ಸರ್ಕಾರಿ ವೆಬ್‌ಸೈಟ್‌ಗಳನ್ನು ಗುರಿಯಾಗಿಸಿ ದಾಳಿ ಮಾಡಬಹುದು ಎಂದು ಹೇಳಿದೆ‘ ಎಂದಿದೆ.

ಈ ಹ್ಯಾಕರ್‌ಗಳ ಗುಂಪು 1,200ರಷ್ಟು ಸರ್ಕಾರದ ವೆಬ್‌ಸೈಟ್‌ಗಳ ವಿರುದ್ಧ ಉದ್ದೇಶಪೂರ್ವಕವಾಗಿ ದಾಳಿ ನಡೆಸುವ ಇರಾದೆ ಹೊಂದಿದೆ ಎಂದೂ ವರದಿಯಲ್ಲಿದೆ.

‘ನಾವು ಡಿಜಿಟಲ್ ರೂಪಾಂತರದ ಹಾದಿಯಲ್ಲಿ ವೇಗವಾಗಿ ಮುನ್ನಡೆಯುತ್ತಿರುವ ಹೊತ್ತಿನಲ್ಲಿ, ಸೈಬರ್ ಸುರಕ್ಷತೆಗೆ ಹೆಚ್ಚಿನ ಗಮನ ನೀಡುತ್ತಿಲ್ಲ. DoS ಮತ್ತು DDoS ದಾಳಿಗಳು ಅತಿ ದೊಡ್ಡ ದಾಳಿಯ ಪ್ರಕಾರಗಳಾಗಿವೆ. ಏಕೆಂದರೆ, ಈ ಪ್ರೋಗ್ರಾಮ್ ಅನ್ನು ಸುಲಭವಾಗಿ ಅಳವಡಿಸಿ, ಅವುಗಳು ಹರಡುವ ಪ್ರಮಾಣದ ಜತೆಗೆ ವೇಗವನ್ನು ಹೆಚ್ಚಿಸುವಂತೆ ರೂಪಿಸಬಹುದು‘ ಎಂದು ಇಂಡಸ್ ಸೈಬರ್ ಸೆಕ್ಯುರಿಟಿ ಸಂಸ್ಥೆಯ ಸಿಇಒ ಆಶಿಶ್ ಟಂಡನ್ ತಿಳಿಸಿದ್ದಾರೆ.

‘ಇಂದು ಹ್ಯಾಕರ್‌ಗಳು ಸುಧಾರಿತ ಕ್ಲೌಡ್ ಆಧಾರಿತ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ದಾಳಿ ಸಂಘಟಿಸುತ್ತಾರೆ. ಸರ್ಕಾರವು ತನ್ನ ಡಿಜಿಟಲ್ ಮೂಲಸೌಕರ್ಯವನ್ನು ಕ್ಲೌಡ್‌ಗೆ ಬದಲಾಯಿಸುವ ಸಮಯ ಬಂದಿದೆ‘ ಎಂದು ಅವರು ತಿಳಿಸಿದರು.

2022ರಲ್ಲಿ ದೇಶದ 19 ಸರ್ಕಾರಿ ವೆಬ್‌ಸೈಟ್‌ಗಳು ಹ್ಯಾಕಿಂಗ್ ದಾಳಿಗೆ ಒಳಪಟ್ಟಿದ್ದವು.

andolanait

Recent Posts

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

5 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

5 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

12 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

12 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

12 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

12 hours ago