BREAKING NEWS

ಚುನಾವಣಾ ಇತಿಹಾಸದಲ್ಲೇ ದಾಖಲೆಯ ನೋಟಾ ಮತಗಳಿಗೆ ಸಾಕ್ಷಿಯಾದ ಇಂದೋರ್ ಕ್ಷೇತ್ರ

ಇಂದೋರ್: ಚುನಾವಣಾ ಇತಿಹಾಸದಲ್ಲೇ ಅತಿ ಹೆಚ್ಚು ನೋಟಾ ಮತಗಳ ಚಲಾವಣೆಗೆ ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರ ಸಾಕ್ಷಿಯಾಗಿದೆ.

ಇಂದೋರ್‌ನಲ್ಲಿ 2.18 ಲಕ್ಷ ಜನರು NONE OF THE ABOVE (NOTA) ‘ಮೇಲಿನ ಯಾರೂ ಅಲ್ಲ’ ಆಯ್ಕೆಯನ್ನು ಒತ್ತಿದ್ದಾರೆ. ಇದರೊಂದಿಗೆ ಚುನಾವಣಾ ಇತಿಹಾಸದಲ್ಲೇ ಕ್ಷೇತ್ರವೊಂದರಲ್ಲಿ ಅತಿ ಹೆಚ್ಚು ನೋಟಾ ಮತ ಚಲಾವಣೆಯಾದಂತಾಗಿದೆ. ವಿಪರ್ಯಾಸ ಎಂದರೆ ಈ ಕ್ಷೇತ್ರದಲ್ಲಿ ನೋಟಾ ಎರಡನೇ ಸ್ಥಾನ ಪಡೆದಿರುವುದು ಆಶ್ಚರ್ಯವಾಗಿದೆ.

ಬಿಜೆಪಿ ಅಭ್ಯರ್ಥಿ ಶಂಕರ್ ಲಲ್ವಾನಿ ಅವರು 12,26,571 ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ. ಅವರ ಹತ್ತಿರದ ಪ್ರತಿಸ್ಪರ್ಧಿ ಬಹುಜನ ಸಮಾಜವಾದಿ ಪಕ್ಷ ಸಂಜಯ್ ಅವರು 51,659 ಮತಗಳನ್ನು ಪಡೆದಿದ್ದಾರೆ. ಸಂಜಯ್ ಅವರಿಗಿಂತಲೂ ಹೆಚ್ಚು (2,18,674) ನೋಟಾ ಮತಗಳು ಚಲಾವಣೆಯಾಗಿರುವುದು ವಿಶೇಷ ಹಾಗೂ ಆಶ್ಚರ್ಯಕರ.

2019ರಲ್ಲಿ ಬಿಹಾರದ ಎಸ್‌ಸಿ ಮೀಸಲು ಕ್ಷೇತ್ರ ಗೋಪಾಲ್‌ಗಂಜ್‌ನಲ್ಲಿ 51,660 ನೋಟಾ ಮತಗಳು ದಾಖಲಾಗಿದ್ದವು. ಇದು ಈವರೆಗಿನ ದಾಖಲೆಯಾಗಿತ್ತು. 2014 ರಲ್ಲಿ ತಮಿಳುನಾಡಿನ ನೀಲಗಿರಿ ಕ್ಷೇತ್ರದಲ್ಲಿ 46,559 ನೋಟಾ ಮತಗಳು ಚಲಾವಣೆಗೊಂಡಿದ್ದವು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

3 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

3 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

4 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

5 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

6 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

6 hours ago