BREAKING NEWS

ಇಂದೋರ್ ದೇವಸ್ಥಾನದ ಮೆಟ್ಟಿಲುಬಾವಿ ದುರಂತ: 35ಕ್ಕೆ ಏರಿದ ಸಾವಿನ ಸಂಖ್ಯೆ

ಇಂದೋರ್ (ಮಧ್ಯ ಪ್ರದೇಶ): ನಗರದ ಬಲೇಶ್ವರ್ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ದುರಂತಕ್ಕೆ ಸಾವಿಗೀಡಾದವರ ಸಂಖ್ಯೆ ಶುಕ್ರವಾರ 35ಕ್ಕೆ ಏರಿದ್ದು, ಒಬ್ಬರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಗುರುವಾರ ರಾಮನವಮಿ ಆಚರಣೆ ವೇಳೆ ದೇವಸ್ಥಾನದಲ್ಲಿ ಜನ ದಟ್ಟಣೆ ಏರ್ಪಟ್ಟಿತ್ತು. ಅಲ್ಲಿರುವ ಬಾವಿಯಲ್ಲಿ ಪವಿತ್ರ ಸ್ನಾನ ಮಾಡಲು ಭಕ್ತರ ದಂಡು ಜಮಾಯಿಸಿತ್ತು. ಈ ವೇಳೆ ನಾಲ್ಕು ದಶಕಗಳಷ್ಟು ಹಳೆಯ ಮೆಟ್ಟಿಲು ಕುಸಿದಿದೆ. ಪರಿಣಾಮ ಅದರ ಮೇಲೆ ನಿಂತಿದ್ದ ಹಲವಾರು ಜನರು ಬಾವಿಗೆ ಬಿದ್ದಿದ್ದು, 11 ಜನರ ಮೃತದೇಹವನ್ನು ಅಗ್ನಿಶಾಮಕ ದಳದವರು ಹೊರತೆಗೆದಿದ್ದರು. ಉಳಿದವರ ಪತ್ತೆಗಾಗಿ ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ) ಹಾಗೂ ಸೇನೆಯ ಸಹಾಯದಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

’ಅವಘಡದಲ್ಲಿ ಗಾಯಗೊಂಡ 16 ಮಂದಿಯನ್ನು ಆಸ್ಪತ್ರೆಗೆ ದಾಖಲುಪಡಿಸಲಾಗಿದೆ. ಹಾಗೂ ಇಬ್ಬರಿಗೆ ಪ್ರಥಮ ಚಿಕಿತ್ಸೆ ಕೊಡಲಾಗಿದೆ’ ಎಂದು ದುರಂತ ನಡೆದ ಸಂದರ್ಭ ಕಂದಾಯ ಆಯುಕ್ತರಾದ ಪವನ್ ಕುಮಾರ್ ಶರ್ಮಾ ಅವರು ಹೇಳಿದ್ದರು.

’ತುಂಬಾ ಇಕ್ಕಟ್ಟಾದ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಿದ್ದು, ಇಲ್ಲಿನ ಬಾವಿಯ ನೀರು ಪಂಪು ಮಾಡಿ ಮೇಲೆತ್ತಲು ಬಳಸುವ ಕೊಳವೆ ದ್ವಾರ ಒಡೆದಿದ್ದರಿಂದ ದುರ್ಘಟನೆ ಸಂಭವಿಸಿದೆ’ ಎಂಬುದು ಅಧಿಕಾರಿಗಳ ಅಭಿಪ್ರಾಯ.

’ಕಳಪೆ ಗುಣಮಟ್ಟದ ಸಿಮೆಂಟು ಹಲಗೆ ಬಳಸಿ ಬಾವಿ ಮೇಲೆ ಮೆಟ್ಟಿಲನ್ನು ನಿರ್ಮಿಸಲಾಗಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

9 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago